ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು.

ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಲಿಂ.ಯುಮುನಾಬಾಯಿ ಕಲಕೇರಿ, ದಿ.ಎಚ್.ಆರ್.ಕಲಕೇರಿ ಹಾಗೂ ಗಿರಿಜಾಬಾಯಿ ಕಲಕೇರಿ ಅವರ ಸ್ಮರಣಾರ್ಥ ಬುಧವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಣರು ಸಮಾಜದಲ್ಲಿ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಜೀವಂತ ಇರುವ ಅನಿಷ್ಟ ಆಚರಣೆಗಳನ್ನು ತೊಡೆದು ಹಾಕಲು ನಿತ್ಯವೂ ನಾವು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು.ದಿ.ಎಚ್.ಆರ್.ಕಲಕೇರಿ ಅವರು ಶಿಕ್ಷಕರಾಗಿದ್ದುಕೊಂಡು ಶರಣ ತತ್ವವನ್ನು ಅನುಸರಿಸಿದವರು.ಅವರ ಪುತ್ರ ಐಎಎಸ್ ಉತ್ತೀರ್ಣರಾಗಿ ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರಿಗೆ ದೈವ ಕರುಣಿಸಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕ ಸಿ.ಜಿ.ನಾಗರಾಳ, ಆಯುರ್ವೇದ ವೈದ್ಯ ರಾಜಶೇಖರ ಚಿರ್ಚನಕಲ್ ಮಾತನಾಡಿ, ಕಲಕೇರಿ ಅವರ ಜೀವನ ಹಾಗೂ ಆಯುರ್ವೇದದಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸಿದರು.ಮಡಿವಾಳೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ್, ಕಾರ್ಯದರ್ಶಿ ಜಿ.ಎಸ್.ಕೋರಿ, ಬಾಪುಗೌಡ ಪಾಟೀಲ್, ಮಲ್ಲಿಕಾರ್ಜುನ ಕೋರಿ,ಮಡಿವಾಳಪ್ಪಗೌಡ ಬಿರಾದಾರ,ಶಂಕರಗೌಡ ಬಿರಾದಾರ, ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮಹಾದೇವಿ ಕಂಠಿ, ಭಾರತಿ ಪಾಟೀಲ್ ,ಶಾಲೆಯ ಮಖ್ಯಗುರು ರಮೇಶ ಮೂಲಿಮನಿ ಮೊದಲಾದವರು ಇದ್ದರು.ನಾನಾಗೌಡ ಕೊಣ್ಣೂರ ಬಸವಭಾವ ಪೂಜೆ ಮಾಡಿದರು.ಎಸ್.ಎ.ಬೇವಿನಗಿಡದ ಸ್ವಾಗತಿಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು