ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು.

ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಲಿಂ.ಯುಮುನಾಬಾಯಿ ಕಲಕೇರಿ, ದಿ.ಎಚ್.ಆರ್.ಕಲಕೇರಿ ಹಾಗೂ ಗಿರಿಜಾಬಾಯಿ ಕಲಕೇರಿ ಅವರ ಸ್ಮರಣಾರ್ಥ ಬುಧವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಣರು ಸಮಾಜದಲ್ಲಿ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಜೀವಂತ ಇರುವ ಅನಿಷ್ಟ ಆಚರಣೆಗಳನ್ನು ತೊಡೆದು ಹಾಕಲು ನಿತ್ಯವೂ ನಾವು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು.ದಿ.ಎಚ್.ಆರ್.ಕಲಕೇರಿ ಅವರು ಶಿಕ್ಷಕರಾಗಿದ್ದುಕೊಂಡು ಶರಣ ತತ್ವವನ್ನು ಅನುಸರಿಸಿದವರು.ಅವರ ಪುತ್ರ ಐಎಎಸ್ ಉತ್ತೀರ್ಣರಾಗಿ ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರಿಗೆ ದೈವ ಕರುಣಿಸಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕ ಸಿ.ಜಿ.ನಾಗರಾಳ, ಆಯುರ್ವೇದ ವೈದ್ಯ ರಾಜಶೇಖರ ಚಿರ್ಚನಕಲ್ ಮಾತನಾಡಿ, ಕಲಕೇರಿ ಅವರ ಜೀವನ ಹಾಗೂ ಆಯುರ್ವೇದದಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸಿದರು.ಮಡಿವಾಳೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ್, ಕಾರ್ಯದರ್ಶಿ ಜಿ.ಎಸ್.ಕೋರಿ, ಬಾಪುಗೌಡ ಪಾಟೀಲ್, ಮಲ್ಲಿಕಾರ್ಜುನ ಕೋರಿ,ಮಡಿವಾಳಪ್ಪಗೌಡ ಬಿರಾದಾರ,ಶಂಕರಗೌಡ ಬಿರಾದಾರ, ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮಹಾದೇವಿ ಕಂಠಿ, ಭಾರತಿ ಪಾಟೀಲ್ ,ಶಾಲೆಯ ಮಖ್ಯಗುರು ರಮೇಶ ಮೂಲಿಮನಿ ಮೊದಲಾದವರು ಇದ್ದರು.ನಾನಾಗೌಡ ಕೊಣ್ಣೂರ ಬಸವಭಾವ ಪೂಜೆ ಮಾಡಿದರು.ಎಸ್.ಎ.ಬೇವಿನಗಿಡದ ಸ್ವಾಗತಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು