ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು.

ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಲಿಂ.ಯುಮುನಾಬಾಯಿ ಕಲಕೇರಿ, ದಿ.ಎಚ್.ಆರ್.ಕಲಕೇರಿ ಹಾಗೂ ಗಿರಿಜಾಬಾಯಿ ಕಲಕೇರಿ ಅವರ ಸ್ಮರಣಾರ್ಥ ಬುಧವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಣರು ಸಮಾಜದಲ್ಲಿ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಜೀವಂತ ಇರುವ ಅನಿಷ್ಟ ಆಚರಣೆಗಳನ್ನು ತೊಡೆದು ಹಾಕಲು ನಿತ್ಯವೂ ನಾವು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು.ದಿ.ಎಚ್.ಆರ್.ಕಲಕೇರಿ ಅವರು ಶಿಕ್ಷಕರಾಗಿದ್ದುಕೊಂಡು ಶರಣ ತತ್ವವನ್ನು ಅನುಸರಿಸಿದವರು.ಅವರ ಪುತ್ರ ಐಎಎಸ್ ಉತ್ತೀರ್ಣರಾಗಿ ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರಿಗೆ ದೈವ ಕರುಣಿಸಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕ ಸಿ.ಜಿ.ನಾಗರಾಳ, ಆಯುರ್ವೇದ ವೈದ್ಯ ರಾಜಶೇಖರ ಚಿರ್ಚನಕಲ್ ಮಾತನಾಡಿ, ಕಲಕೇರಿ ಅವರ ಜೀವನ ಹಾಗೂ ಆಯುರ್ವೇದದಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸಿದರು.ಮಡಿವಾಳೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ್, ಕಾರ್ಯದರ್ಶಿ ಜಿ.ಎಸ್.ಕೋರಿ, ಬಾಪುಗೌಡ ಪಾಟೀಲ್, ಮಲ್ಲಿಕಾರ್ಜುನ ಕೋರಿ,ಮಡಿವಾಳಪ್ಪಗೌಡ ಬಿರಾದಾರ,ಶಂಕರಗೌಡ ಬಿರಾದಾರ, ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮಹಾದೇವಿ ಕಂಠಿ, ಭಾರತಿ ಪಾಟೀಲ್ ,ಶಾಲೆಯ ಮಖ್ಯಗುರು ರಮೇಶ ಮೂಲಿಮನಿ ಮೊದಲಾದವರು ಇದ್ದರು.ನಾನಾಗೌಡ ಕೊಣ್ಣೂರ ಬಸವಭಾವ ಪೂಜೆ ಮಾಡಿದರು.ಎಸ್.ಎ.ಬೇವಿನಗಿಡದ ಸ್ವಾಗತಿಸಿದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್