ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು.

ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಲಿಂ.ಯುಮುನಾಬಾಯಿ ಕಲಕೇರಿ, ದಿ.ಎಚ್.ಆರ್.ಕಲಕೇರಿ ಹಾಗೂ ಗಿರಿಜಾಬಾಯಿ ಕಲಕೇರಿ ಅವರ ಸ್ಮರಣಾರ್ಥ ಬುಧವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಣರು ಸಮಾಜದಲ್ಲಿ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಜೀವಂತ ಇರುವ ಅನಿಷ್ಟ ಆಚರಣೆಗಳನ್ನು ತೊಡೆದು ಹಾಕಲು ನಿತ್ಯವೂ ನಾವು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು.ದಿ.ಎಚ್.ಆರ್.ಕಲಕೇರಿ ಅವರು ಶಿಕ್ಷಕರಾಗಿದ್ದುಕೊಂಡು ಶರಣ ತತ್ವವನ್ನು ಅನುಸರಿಸಿದವರು.ಅವರ ಪುತ್ರ ಐಎಎಸ್ ಉತ್ತೀರ್ಣರಾಗಿ ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರಿಗೆ ದೈವ ಕರುಣಿಸಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕ ಸಿ.ಜಿ.ನಾಗರಾಳ, ಆಯುರ್ವೇದ ವೈದ್ಯ ರಾಜಶೇಖರ ಚಿರ್ಚನಕಲ್ ಮಾತನಾಡಿ, ಕಲಕೇರಿ ಅವರ ಜೀವನ ಹಾಗೂ ಆಯುರ್ವೇದದಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸಿದರು.ಮಡಿವಾಳೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ್, ಕಾರ್ಯದರ್ಶಿ ಜಿ.ಎಸ್.ಕೋರಿ, ಬಾಪುಗೌಡ ಪಾಟೀಲ್, ಮಲ್ಲಿಕಾರ್ಜುನ ಕೋರಿ,ಮಡಿವಾಳಪ್ಪಗೌಡ ಬಿರಾದಾರ,ಶಂಕರಗೌಡ ಬಿರಾದಾರ, ಕದಳಿ ವೇದಿಕೆ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಮಹಾದೇವಿ ಕಂಠಿ, ಭಾರತಿ ಪಾಟೀಲ್ ,ಶಾಲೆಯ ಮಖ್ಯಗುರು ರಮೇಶ ಮೂಲಿಮನಿ ಮೊದಲಾದವರು ಇದ್ದರು.ನಾನಾಗೌಡ ಕೊಣ್ಣೂರ ಬಸವಭಾವ ಪೂಜೆ ಮಾಡಿದರು.ಎಸ್.ಎ.ಬೇವಿನಗಿಡದ ಸ್ವಾಗತಿಸಿದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ