Children's art at Pratibha Karanji

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ ಹೊರಹೊಮ್ಮುತ್ತಿತ್ತು. ವಿದ್ಯಾರ್ಥಿಗಳ ನೃತ್ಯ, ನಾಟಕ, ರಂಗೋಲಿ, ಛದ್ಮವೇಷ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಜತೆಗೆ ಕಲೆಯನ್ನೂ ಮೇಳೈಸುವಂತೆ ಮಾಡಿದರು.

ಶಾಲಾ ಶಿಕ್ಷಣ ಇಲಾಖೆ, ಎಸ್ ಡಿಎಂಸಿ ಅಧ್ಯಕ್ಷ ಲಕ್ಕಪ್ಪ ನಾಗರಬೆಟ್ಟ ಹಾಗೂ ಲೊಟಗೇರಿ ಗ್ರಾಮಸ್ಥರ ನೇತೃತ್ವದಲ್ಲಿ ಆಯೋಜಿಸಲಾದ ರಕ್ಕಸಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ವಿವಿಧ ಸ್ಪರ್ಧೆಗಳು ನಡೆದವು. ಡಾ.ಗುರುಮೂರ್ತಿ ಕಣಕಾಲಮಠ ಕಾರ್ಯಕ್ರಮ ಉದ್ಘಾಟಿಸಿ ‘ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದು ಹೇಳಿದರು. ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸನಗೌಡ ಮುದ್ನೂರ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯ ವಿಷಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು’ ಎಂದರು. ಸಿಆರ್ ಪಿ ಮಹಾಂತೇಶ ನೂಲಿನವರ ಮಾತನಾಡಿ ‘ಕಲೋತ್ಸವ ಮಕ್ಕಳ ಮುಂದಿನ ಭವಿಷ್ಯದಲ್ಲಿ ಅವರು ಯಾವ ಕ್ಷೇತ್ರದಲ್ಲಿ ಉತ್ತಮ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪೂರಕವಾಗುತ್ತದೆ. ಅಷ್ಟೇ ಅಲ್ಲ ವರ್ಷಂಪ್ರತಿ ಪಾಠಗಳನ್ನು ಆಲಿಸುವ ಮಕ್ಕಳಿಗೆ ಇದರಿಂದ ಹೊಸತನ ದೊರೆಯುತ್ತದೆ ಎಂದರು.ಟಕ್ಕಳಕಿ ಶಾಲೆಯ ವಿದ್ಯಾರ್ಥಿಗಳು ರಸಪ್ರಶ್ನೆಯಲ್ಲಿ ಸಾಧನೆ ಮಾಡಿದರೆ, ಹುನಕುಂಟಿಯ ವಿದ್ಯಾರ್ಥಿನಿ ಅಕ್ಕಮಹಾದೇವಿ, ಸರಸ್ವತಿ ವೇಷದಲ್ಲಿ ಗಮನಸೆಳೆದರು.

ಮುಖ್ಯಗುರುಗಳಾದ ಗಂಗಣ್ಣ ಕಮರಿ, ಎಚ್. ಜಿ. ಗೌರೋಜಿ, ಎ. ಸಿ. ನರಸಲಗಿ, ಯಮನಪ್ಪ ನಾಗಬೇನಾಳ, ಎಸ್. ಎಸ್. ನಾಗರಬೆಟ್ಟ, ಅಧ್ಯಕ್ಷ ಬಿ. ಎಸ್. ಮುದನೂರ, ಎಸ್. ಬಿ. ತೊಗರಿ, ಎಸ್. ಐ. ಗಂಗನಗೌಡ್ರ, ಆರ್. ಎಸ್. ಹಿರೇಮಠ, ಸಂಗಣ್ಣ ಟಕ್ಕಳಕಿ, ಎ. ಪಿ. ಸಿರಗುಂಪಿ, ಲಕ್ಕಪ್ಪ ನಾಗರಬೆಟ್ಟ, ಉಪಸ್ಥಿತರಿದ್ದರು.

Latest News

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿ ವರ್ತಕ ಮಲ್ಲನಗೌಡ ಬಿರಾದಾರ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಕಬ್ಬು ಬೆಳೆದಿರುವ ರೈತರು ಕೇಳುತ್ತಿರುವ ನ್ಯಾಯಯುತ ಬೆಲೆ 3500 ರೂ ಘೋಷಣೆ ಮಾಡದೇ ಸರ್ಕಾರ ಮೌನವಾಗಿದೆ.ಕ್ಷೇತ್ರದ ಶಾಸಕರು ರೈತರಿಂದಲೇ ಶಾಸಕರಾಗಿದ್ದೀರಿ ಅವರಿಗೆ ಬೆಂಬಲ ನೀಡುವ ಕಾರ್ಯ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಬ್ಬಿಗೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ನಡೆದಿರುವ ಮೂರನೇ ದಿನದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು.