Children's day celebration in the presence of guardians and parents in government school

ಸರಕಾರಿ ಶಾಲೆಯಲ್ಲಿ ಪಾಲಕ ಮತ್ತು ಪೋಷಕರ ಸಮ್ಮುಖದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಸರಕಾರಿ ಶಾಲೆಯಲ್ಲಿ ಪಾಲಕ ಮತ್ತು ಪೋಷಕರ ಸಮ್ಮುಖದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಹುಣಸಗಿ: ತಾಲೂಕಿನ ಮದಲಿಂಗನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮಕ್ಕಳಿಗೆ ಪದಕ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದ್ದು ವಿಶೇಷವಾಗಿತ್ತು ಜೊತೆಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ರಸಪ್ರಶ್ನೆ ಕಥೆ ಹೇಳುವುದು ಗಾಯನ ಇನ್ನು ಇತರೆ ಸ್ಪರ್ಧೆಗಳು ಏರ್ಪಡಿಸಲಾಗಿತ್ತು.

ಇದೇ ವೇಳೆ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರು ಮಾತನಾಡಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಅಗ್ರಗಣ್ಯ ಮಾನ್ಯರಲ್ಲಿ ಜವಾಲಾಲ್ ನೆಹರು ಕೂಡ ಒಬ್ಬರು. ಅವರು ಸ್ವತಂತ್ರದ ನಂತರ ದೇಶದ ಪ್ರಪ್ರಥಮ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು ಹಾಗೂ ದೇಶದ ಪ್ರಗತಿಗಾಗಿ ಸೇವೆ ಸಲ್ಲಿಸಿದ್ದಾರೆ ಇಡೀ ಜೀವನವನ್ನೇ ಮಕ್ಕಳಿಗಾಗಿ ಮೀಸಲಿಟ್ಟ ಜಗತ್ತಿನ ಏಕೈಕ ವ್ಯಕ್ತಿ ಚಾಚಾ ನೆಹರು ಅವರ ಸನ್ಮಾರ್ಗದಲ್ಲಿ ನಾವು ನೀವೆಲ್ಲರೂ ಸಾಗೋಣ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮಲ್ಲಿಕಾರ್ಜುನ ಕತ್ತಿ ಅವರು ವಹಿಸಿಕೊಂಡಿದ್ದರು. ಹಣಮೇಶ ಗಿಡ್ನೂರ್ ಶರಣು ಹುಡೇದ್ ಬಸವರಾಜ್ ಹುಡೇದ್ ಗೀತಾ ಟೀಚರ್ ಬೀರಪ್ಪ ಕುರಿ ಕಾನೇಶ್ ಕೊಡೆಕಲ, APMC ಅಧ್ಯಕ್ಷರಾದ ಚನ್ನಪ್ಪ ಹವಾಲ್ದಾರ ಪತ್ರಕರ್ತರಾದ ಬಸನಗೌಡ ಬಿರಾದಾರ ಹಾಗೂ ಊರಿನ ಹಿರಿಯರಾದ ಶರಣಪ್ಪ ರಕ್ಕಸಗಿ ಸೋಮಲಿಂಗಪ್ಪ ಪೂಜಾರಿ ಬಸವರಾಜ ಗೆದ್ದಲಮರಿ ಯಂಕನಗೌಡ ಪೊಲೀಸ್ ಪಾಟೀಲ್ ಸಾಹೇಬ್ ಗೌಡ ಪೊಲೀಸ್ ಪಾಟೀಲ್ ಶಿಕ್ಷಣ ಪ್ರೇಮಿಗಳಾದ ಮಂಜು ಬಿಜ್ಜುರ್ ಸಿದ್ದು ಶಾಂತಗೌಡ ಪಾಟೀಲ್ ಉಪಸ್ಥಿತರಿದ್ದರು. ಶರಣು ಹುಡೇದ್ ಶಿಕ್ಷಕರು ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು.

ವರದಿ: ಶಿವು ರಾಥೋಡ

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ