Circulation of fake notes – real estate worker arrested!

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ (bhadravati), ಜೂ. 15: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಭದ್ರಾವತಿಯ ಭಂಡಾರಹಳ್ಳಿ ಎದುರಿನ ನಾಗಮ್ಮ ಲೇಔಟ್ ನಿವಾಸಿ, ರಿಯಲ್ ಎಸ್ಟೇಟ್ ಕೆಲಸ ಮಾಡುವ ರಂಗೇಗೌಡ (57) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು ಹಾಗೂ 200 ರೂ., 100 ರೂ., 50 ರೂ. ಮುಖಬೆಲೆಯ ತಲಾ 1 ನಕಲಿ ನೋಟು ಹಾಗೂ ಕೃತ್ಯಕ್ಕೆ ಬಳಸಿದ್ದ ಡಿಸ್ಕವರ್ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯು ಬೇರೆಡೆಯೂ ನಕಲಿ ನೋಟುಗಳ ಚಲಾವಣೆ ಮಾಡಿರುವ ಕುರಿತಂತೆ ಪೊಲೀಸರ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ OFP 790829 ಹಾಗೂ 9TV 978202 ಕ್ರಮ ಸಂಖ್ಯೆಯ 500 ಮುಖಬೆಲೆಯ ನೋಟುಗಳು ಕಂಡುಬಂದಲ್ಲಿ, ಪೊಲೀಸರಿಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಜೂನ್ 14 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ

ಸಿಕ್ಕಿದ್ದು ಹೇಗೆ? : ಭದ್ರಾವತಿ ನಗರದ ಕೂಲಿ ಬ್ಲಾಕ್ ಶೆಡ್ ನಿವಾಸಿ ಅಜಯ್ ಎಂಬುವರಿಗೆ 12-6-2025 ರ ಸಂಜೆ ಡಿಸ್ಕವರ್ ಬೈಕ್ ನಲ್ಲಿ ಆಗಮಿಸಿದ ಆರೋಪಿಯು, 500 ರೂ. ನಕಲಿ ನೋಟು ನೀಡಿ ವ್ಯಾಪಾರ ಮಾಡಿ ತೆರಳಿದ್ದ. ಈ ಕುರಿತಂತೆ ಅಜಯ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಭದ್ರಾವತಿ ಡಿವೈಎಸ್ಪಿ ನಾಗರಾಜ್, ಇನ್ಸ್‌ಪೆಕ್ಟರ್ ಮಂಜುನಾಥ್, ಪಿಎಸ್ಐ ರಮೇಶ್, ಎಎಸ್ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ವಿಜಯ್, ಶ್ರೀಧರ್, ಮಾರುತಿ ಪಾಟೀಲ್, ಪ್ರಸನ್ನ, ರಘು, ನಾಗರಾಜಪ್ಪರವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ: ಶಿವು ರಾಥೋಡ

Latest News

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ನಡೆಸಿದರ ಬೆನ್ನಿಗೇ

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ (bhadravati), ಜೂ. 15: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ

ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ಮುದ್ದೇಬಿಹಾಳ : ಪಟ್ಟಣದ ಲಾಡ್ಜ್ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಂಘವಿ ಲಾಡ್ಜ್ನಲ್ಲಿ ಈ ಘಟನೆ ನಡೆದಿದೆ.ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ಕೋಳೂರು ತಾಂಡಾದ ಅನಿಲ್

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಧಾರವಾಡ, ಜೂ.14: ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್. ಲಾಡ್‌ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಅವರು ವೀಕ್ಷಣೆ ಮಾಡಿದರು. ರಸ್ತೆ, ಸೇತುವೆ ಹಾಗೂ ಇತರ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ,