ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಂಡು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ನೂತನ ಅಧ್ಯಕ್ಷರಾಗಿ ಚೆನ್ನಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಬ್ಯಾಂಕು ಸದಾ ಅಭಿವೃದ್ಧಿಪಥದತ್ತ ಸಾಗಲು ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರಿಗೂ ಅಧಿಕಾರದ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಊರಿನ ಹಿರಿಯರು ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಮಾತನಾಡಿ, ಬ್ಯಾಂಕಿನ ಐದು ವರ್ಷದ ಅವಧಿಯಲ್ಲಿ ನಾಲ್ವರಿಗೆ ಅಧಿಕಾರ ಹಂಚಿಕೆ ಸೂತ್ರದಡಿ ನಿರ್ದೇಶಕರುಗಳಿಗೆ ಅವಕಾಶ ಕಲ್ಪಿಸಿದ್ದು ತಲಾ ಹದಿನೈದು ತಿಂಗಳಿನAತೆ ಬದಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.ಆರಂಭದಲ್ಲಿ ನನಗೆ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಪ್ರಭುರಾಜ ಕಲ್ಬುರ್ಗಿ, ರಾಜಶೇಖರ ಕರಡ್ಡಿ, ನಿಂಗಣ್ಣ ಚಟ್ಟೇರ ಅವರಿಗೆ ಹಿರಿಯರ ಅಣತಿಯಂತೆ ಅಧ್ಯಕ್ಷ ಸ್ಥಾನ ಕಲ್ಪಿಸಲಾಗುವುದು ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕು ಬದಲಾವಣೆ ಇರಲಿದೆ ಎಂದು ಹೇಳಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಸನ್ಮಾನಿಸಿದರು.

ಜಾಣ ನಡೆ ಅನುಸರಿಸಿದ ಊರ ಹಿರಿಯರು: ಅಧ್ಯಕ್ಷರಾಗಲು ಮೂವರ ಮಧ್ಯೆ ನಾ ಮುಂದೆ ತಾ ಮುಂದೆ ಎಂಬAತೆ ಪೈಪೋಟಿ ಇತ್ತು.ಆದರೆ ಇದಕ್ಕೆ ಆಸ್ಪದ ನೀಡದೇ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದು ಅಲ್ಲದೇ ಅಧಿಕಾರ ಹಂಚಿಕೆಯ ಸೂತ್ರದಡಿ ಅಧ್ಯಕ್ಷರನ್ನು ಬದಲಾಯಿಸಲಾಗುವುದು ಎಂದು ಊರಿನ ಹಿರಿಯರು, ಬ್ಯಾಂಕಿನ ಹಿರಿಯ ನಿರ್ದೇಶಕರು ಮಾತು ಕೊಟ್ಟಿರುವುದು ಇನ್ನುಳಿದ ಆಕಾಂಕ್ಷಿಗಳ ಅಪಸ್ವರಕ್ಕೆ ಆಸ್ಪದ ಸಿಗಲಿಲ್ಲ.ಅಲ್ಲದೇ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು ಎಂಬ ಮಾತುಗಳು ಬಂದವು.

ಈಗಾಗಲೇ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ ಅವರು ಸ್ವಯಂಪ್ರೇರಿತರಾಗಿ ಅಧ್ಯಕ್ಷ ಸ್ಥಾನವನ್ನು ವಿನಯಂದಿAದಲೇ ನಿರಾಕರಿಸಿದರು.ಮತ್ತೊಬ್ಬರಿಗೆ ಅವಕಾಶ ಸಿಗಲಿ, ಬ್ಯಾಂಕಿನ ಪ್ರಗತಿಗೆ ಬೇಕಾದ ಸಹಕಾರ ನೀಡುವುದಾಗಿ ಹೇಳಿದ್ದು ಮಹತ್ವ ಪಡೆದುಕೊಂಡಿದೆ. ಸತೀಶ ಓಸ್ವಾಲ್ ಅವರ ಅಧ್ಯಕ್ಷತೆಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಸಭಾಭವನ, ಬ್ಯಾಂಕಿನ ಡಿಜಟಿಲೀಕರಣಕ್ಕೆ ಒತ್ತು ನೀಡಿದ್ದು ಸೇರಿದಂತೆ ಹತ್ತು ಹಲವು ಕಾರ್ಯಗಳು ನಡೆದಿದ್ದು ಹೊಸ ಆಡಳಿತ ಮಂಡಳಿಯವರು ಯಾವ ಕೆಲಸಗಳಿಗೆ ಆದ್ಯತೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ