ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಂಡು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ನೂತನ ಅಧ್ಯಕ್ಷರಾಗಿ ಚೆನ್ನಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಬ್ಯಾಂಕು ಸದಾ ಅಭಿವೃದ್ಧಿಪಥದತ್ತ ಸಾಗಲು ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರಿಗೂ ಅಧಿಕಾರದ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಊರಿನ ಹಿರಿಯರು ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಮಾತನಾಡಿ, ಬ್ಯಾಂಕಿನ ಐದು ವರ್ಷದ ಅವಧಿಯಲ್ಲಿ ನಾಲ್ವರಿಗೆ ಅಧಿಕಾರ ಹಂಚಿಕೆ ಸೂತ್ರದಡಿ ನಿರ್ದೇಶಕರುಗಳಿಗೆ ಅವಕಾಶ ಕಲ್ಪಿಸಿದ್ದು ತಲಾ ಹದಿನೈದು ತಿಂಗಳಿನAತೆ ಬದಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.ಆರಂಭದಲ್ಲಿ ನನಗೆ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಪ್ರಭುರಾಜ ಕಲ್ಬುರ್ಗಿ, ರಾಜಶೇಖರ ಕರಡ್ಡಿ, ನಿಂಗಣ್ಣ ಚಟ್ಟೇರ ಅವರಿಗೆ ಹಿರಿಯರ ಅಣತಿಯಂತೆ ಅಧ್ಯಕ್ಷ ಸ್ಥಾನ ಕಲ್ಪಿಸಲಾಗುವುದು ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕು ಬದಲಾವಣೆ ಇರಲಿದೆ ಎಂದು ಹೇಳಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಸನ್ಮಾನಿಸಿದರು.

ಜಾಣ ನಡೆ ಅನುಸರಿಸಿದ ಊರ ಹಿರಿಯರು: ಅಧ್ಯಕ್ಷರಾಗಲು ಮೂವರ ಮಧ್ಯೆ ನಾ ಮುಂದೆ ತಾ ಮುಂದೆ ಎಂಬAತೆ ಪೈಪೋಟಿ ಇತ್ತು.ಆದರೆ ಇದಕ್ಕೆ ಆಸ್ಪದ ನೀಡದೇ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದು ಅಲ್ಲದೇ ಅಧಿಕಾರ ಹಂಚಿಕೆಯ ಸೂತ್ರದಡಿ ಅಧ್ಯಕ್ಷರನ್ನು ಬದಲಾಯಿಸಲಾಗುವುದು ಎಂದು ಊರಿನ ಹಿರಿಯರು, ಬ್ಯಾಂಕಿನ ಹಿರಿಯ ನಿರ್ದೇಶಕರು ಮಾತು ಕೊಟ್ಟಿರುವುದು ಇನ್ನುಳಿದ ಆಕಾಂಕ್ಷಿಗಳ ಅಪಸ್ವರಕ್ಕೆ ಆಸ್ಪದ ಸಿಗಲಿಲ್ಲ.ಅಲ್ಲದೇ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು ಎಂಬ ಮಾತುಗಳು ಬಂದವು.

ಈಗಾಗಲೇ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ ಅವರು ಸ್ವಯಂಪ್ರೇರಿತರಾಗಿ ಅಧ್ಯಕ್ಷ ಸ್ಥಾನವನ್ನು ವಿನಯಂದಿAದಲೇ ನಿರಾಕರಿಸಿದರು.ಮತ್ತೊಬ್ಬರಿಗೆ ಅವಕಾಶ ಸಿಗಲಿ, ಬ್ಯಾಂಕಿನ ಪ್ರಗತಿಗೆ ಬೇಕಾದ ಸಹಕಾರ ನೀಡುವುದಾಗಿ ಹೇಳಿದ್ದು ಮಹತ್ವ ಪಡೆದುಕೊಂಡಿದೆ. ಸತೀಶ ಓಸ್ವಾಲ್ ಅವರ ಅಧ್ಯಕ್ಷತೆಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಸಭಾಭವನ, ಬ್ಯಾಂಕಿನ ಡಿಜಟಿಲೀಕರಣಕ್ಕೆ ಒತ್ತು ನೀಡಿದ್ದು ಸೇರಿದಂತೆ ಹತ್ತು ಹಲವು ಕಾರ್ಯಗಳು ನಡೆದಿದ್ದು ಹೊಸ ಆಡಳಿತ ಮಂಡಳಿಯವರು ಯಾವ ಕೆಲಸಗಳಿಗೆ ಆದ್ಯತೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ