ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಂಡು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ನೂತನ ಅಧ್ಯಕ್ಷರಾಗಿ ಚೆನ್ನಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಬ್ಯಾಂಕು ಸದಾ ಅಭಿವೃದ್ಧಿಪಥದತ್ತ ಸಾಗಲು ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರಿಗೂ ಅಧಿಕಾರದ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಊರಿನ ಹಿರಿಯರು ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಮಾತನಾಡಿ, ಬ್ಯಾಂಕಿನ ಐದು ವರ್ಷದ ಅವಧಿಯಲ್ಲಿ ನಾಲ್ವರಿಗೆ ಅಧಿಕಾರ ಹಂಚಿಕೆ ಸೂತ್ರದಡಿ ನಿರ್ದೇಶಕರುಗಳಿಗೆ ಅವಕಾಶ ಕಲ್ಪಿಸಿದ್ದು ತಲಾ ಹದಿನೈದು ತಿಂಗಳಿನAತೆ ಬದಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.ಆರಂಭದಲ್ಲಿ ನನಗೆ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಪ್ರಭುರಾಜ ಕಲ್ಬುರ್ಗಿ, ರಾಜಶೇಖರ ಕರಡ್ಡಿ, ನಿಂಗಣ್ಣ ಚಟ್ಟೇರ ಅವರಿಗೆ ಹಿರಿಯರ ಅಣತಿಯಂತೆ ಅಧ್ಯಕ್ಷ ಸ್ಥಾನ ಕಲ್ಪಿಸಲಾಗುವುದು ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕು ಬದಲಾವಣೆ ಇರಲಿದೆ ಎಂದು ಹೇಳಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಸನ್ಮಾನಿಸಿದರು.

ಜಾಣ ನಡೆ ಅನುಸರಿಸಿದ ಊರ ಹಿರಿಯರು: ಅಧ್ಯಕ್ಷರಾಗಲು ಮೂವರ ಮಧ್ಯೆ ನಾ ಮುಂದೆ ತಾ ಮುಂದೆ ಎಂಬAತೆ ಪೈಪೋಟಿ ಇತ್ತು.ಆದರೆ ಇದಕ್ಕೆ ಆಸ್ಪದ ನೀಡದೇ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದು ಅಲ್ಲದೇ ಅಧಿಕಾರ ಹಂಚಿಕೆಯ ಸೂತ್ರದಡಿ ಅಧ್ಯಕ್ಷರನ್ನು ಬದಲಾಯಿಸಲಾಗುವುದು ಎಂದು ಊರಿನ ಹಿರಿಯರು, ಬ್ಯಾಂಕಿನ ಹಿರಿಯ ನಿರ್ದೇಶಕರು ಮಾತು ಕೊಟ್ಟಿರುವುದು ಇನ್ನುಳಿದ ಆಕಾಂಕ್ಷಿಗಳ ಅಪಸ್ವರಕ್ಕೆ ಆಸ್ಪದ ಸಿಗಲಿಲ್ಲ.ಅಲ್ಲದೇ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು ಎಂಬ ಮಾತುಗಳು ಬಂದವು.

ಈಗಾಗಲೇ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ ಅವರು ಸ್ವಯಂಪ್ರೇರಿತರಾಗಿ ಅಧ್ಯಕ್ಷ ಸ್ಥಾನವನ್ನು ವಿನಯಂದಿAದಲೇ ನಿರಾಕರಿಸಿದರು.ಮತ್ತೊಬ್ಬರಿಗೆ ಅವಕಾಶ ಸಿಗಲಿ, ಬ್ಯಾಂಕಿನ ಪ್ರಗತಿಗೆ ಬೇಕಾದ ಸಹಕಾರ ನೀಡುವುದಾಗಿ ಹೇಳಿದ್ದು ಮಹತ್ವ ಪಡೆದುಕೊಂಡಿದೆ. ಸತೀಶ ಓಸ್ವಾಲ್ ಅವರ ಅಧ್ಯಕ್ಷತೆಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಸಭಾಭವನ, ಬ್ಯಾಂಕಿನ ಡಿಜಟಿಲೀಕರಣಕ್ಕೆ ಒತ್ತು ನೀಡಿದ್ದು ಸೇರಿದಂತೆ ಹತ್ತು ಹಲವು ಕಾರ್ಯಗಳು ನಡೆದಿದ್ದು ಹೊಸ ಆಡಳಿತ ಮಂಡಳಿಯವರು ಯಾವ ಕೆಲಸಗಳಿಗೆ ಆದ್ಯತೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ