ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಂಡು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ನೂತನ ಅಧ್ಯಕ್ಷರಾಗಿ ಚೆನ್ನಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಬ್ಯಾಂಕು ಸದಾ ಅಭಿವೃದ್ಧಿಪಥದತ್ತ ಸಾಗಲು ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರಿಗೂ ಅಧಿಕಾರದ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಊರಿನ ಹಿರಿಯರು ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಮಾತನಾಡಿ, ಬ್ಯಾಂಕಿನ ಐದು ವರ್ಷದ ಅವಧಿಯಲ್ಲಿ ನಾಲ್ವರಿಗೆ ಅಧಿಕಾರ ಹಂಚಿಕೆ ಸೂತ್ರದಡಿ ನಿರ್ದೇಶಕರುಗಳಿಗೆ ಅವಕಾಶ ಕಲ್ಪಿಸಿದ್ದು ತಲಾ ಹದಿನೈದು ತಿಂಗಳಿನAತೆ ಬದಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.ಆರಂಭದಲ್ಲಿ ನನಗೆ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಪ್ರಭುರಾಜ ಕಲ್ಬುರ್ಗಿ, ರಾಜಶೇಖರ ಕರಡ್ಡಿ, ನಿಂಗಣ್ಣ ಚಟ್ಟೇರ ಅವರಿಗೆ ಹಿರಿಯರ ಅಣತಿಯಂತೆ ಅಧ್ಯಕ್ಷ ಸ್ಥಾನ ಕಲ್ಪಿಸಲಾಗುವುದು ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕು ಬದಲಾವಣೆ ಇರಲಿದೆ ಎಂದು ಹೇಳಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಸನ್ಮಾನಿಸಿದರು.

ಜಾಣ ನಡೆ ಅನುಸರಿಸಿದ ಊರ ಹಿರಿಯರು: ಅಧ್ಯಕ್ಷರಾಗಲು ಮೂವರ ಮಧ್ಯೆ ನಾ ಮುಂದೆ ತಾ ಮುಂದೆ ಎಂಬAತೆ ಪೈಪೋಟಿ ಇತ್ತು.ಆದರೆ ಇದಕ್ಕೆ ಆಸ್ಪದ ನೀಡದೇ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದು ಅಲ್ಲದೇ ಅಧಿಕಾರ ಹಂಚಿಕೆಯ ಸೂತ್ರದಡಿ ಅಧ್ಯಕ್ಷರನ್ನು ಬದಲಾಯಿಸಲಾಗುವುದು ಎಂದು ಊರಿನ ಹಿರಿಯರು, ಬ್ಯಾಂಕಿನ ಹಿರಿಯ ನಿರ್ದೇಶಕರು ಮಾತು ಕೊಟ್ಟಿರುವುದು ಇನ್ನುಳಿದ ಆಕಾಂಕ್ಷಿಗಳ ಅಪಸ್ವರಕ್ಕೆ ಆಸ್ಪದ ಸಿಗಲಿಲ್ಲ.ಅಲ್ಲದೇ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು ಎಂಬ ಮಾತುಗಳು ಬಂದವು.

ಈಗಾಗಲೇ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ ಅವರು ಸ್ವಯಂಪ್ರೇರಿತರಾಗಿ ಅಧ್ಯಕ್ಷ ಸ್ಥಾನವನ್ನು ವಿನಯಂದಿAದಲೇ ನಿರಾಕರಿಸಿದರು.ಮತ್ತೊಬ್ಬರಿಗೆ ಅವಕಾಶ ಸಿಗಲಿ, ಬ್ಯಾಂಕಿನ ಪ್ರಗತಿಗೆ ಬೇಕಾದ ಸಹಕಾರ ನೀಡುವುದಾಗಿ ಹೇಳಿದ್ದು ಮಹತ್ವ ಪಡೆದುಕೊಂಡಿದೆ. ಸತೀಶ ಓಸ್ವಾಲ್ ಅವರ ಅಧ್ಯಕ್ಷತೆಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಸಭಾಭವನ, ಬ್ಯಾಂಕಿನ ಡಿಜಟಿಲೀಕರಣಕ್ಕೆ ಒತ್ತು ನೀಡಿದ್ದು ಸೇರಿದಂತೆ ಹತ್ತು ಹಲವು ಕಾರ್ಯಗಳು ನಡೆದಿದ್ದು ಹೊಸ ಆಡಳಿತ ಮಂಡಳಿಯವರು ಯಾವ ಕೆಲಸಗಳಿಗೆ ಆದ್ಯತೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ