Clearing trees obstructing power lines: HESCOM workers service despite heavy rains

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ಮುದ್ದೇಬಿಹಾಳ: ಪಟ್ಟಣದ ಕೆಜಿಎಸ್ ನಂ.2 ಶಾಲೆಯ ಆವರಣದಲ್ಲಿದ್ದ ಬೃಹತ್ ಆಲದ ಮರದ ರೆಂಬೆ ಕೊಂಬೆಗಳು ಬಜಾರ್‌ದಲ್ಲಿ ಅಂಗಡಿಗಳಿಗೆ ಸಂಪರ್ಕ ಇದ್ದ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಕಾರಣ ಅದನ್ನು ಭಾನುವಾರ ಹೆಸ್ಕಾಂ ಕಾರ್ಮಿಕರು ಸುರಿಯುವ ಮಳೆಯನ್ನೂ ಲೆಕ್ಕಿಸದೇ ತೆರವುಗೊಳಿಸುವ ಕಾರ್ಯ ಕೈಗೊಂಡರು.

ಪಟ್ಟಣದ ಮುಖ್ಯರಸ್ತೆಯಲ್ಲಿರುವ ಅಂಗಡಿಗಳಿಗೆ ಈ ಮರದ ಅಕ್ಕಪಕ್ಕದ ವಿದ್ಯುತ್ ಕಂಬಗಳಿಂದ ಸಂಪರ್ಕ ನೀಡಲಾಗಿದ್ದು ಮಳೆ, ಗಾಳಿ ಬಿಟ್ಟರೆ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಮರದ ರೆಂಬೆ ಕೊಂಬೆಗಳನ್ನು ಮರದ ಅರ್ಧ ಭಾಗವನ್ನು ಕತ್ತರಿಸಿ ವಿದ್ಯುತ್ ಪೂರೈಕೆಗೆ ಅಡಚಣೆಯಾಗಿದ್ದ ಮರದ ಬೃಹತ್ ರೆಂಬೆಯನ್ನು ತೆರವುಗೊಳಿಸಲಾಯಿತು.

ಸಂಜೆ ಸಮಯದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದರೂ ತಂತಿಗಳನ್ನು ಜೋಡಿಸುವ ಕಾರ್ಯವನ್ನು ಹೆಸ್ಕಾಂ ನೌಕರರು, ಗುತ್ತಿಗೆ ನೌಕರರು ಕೈಗೊಂಡರು. ಹೆಸ್ಕಾಂ ಪ್ರಭಾರ ಸೆಕ್ಷನ್ ಅಧಿಕಾರಿ ನಾಗರಾಜ ಬಸರಕೋಡ, ಗುತ್ತಿಗೆದಾರ ಅಪ್ಪುಗೌಡ ಮಾಡಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಮುದ್ದೇಬಿಹಾಳದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.