Clearing trees obstructing power lines: HESCOM workers service despite heavy rains

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ವಿದ್ಯುತ್ ತಂತಿಗಳಿಗೆ ಅಡ್ಡಿಯಾದ ಮರ ತೆರವು:ಸುರಿಯುವ ಮಳೆ ಲೆಕ್ಕಿಸದೇ ಹೆಸ್ಕಾಂ ಕಾರ್ಮಿಕರ ಸೇವೆ

ಮುದ್ದೇಬಿಹಾಳ: ಪಟ್ಟಣದ ಕೆಜಿಎಸ್ ನಂ.2 ಶಾಲೆಯ ಆವರಣದಲ್ಲಿದ್ದ ಬೃಹತ್ ಆಲದ ಮರದ ರೆಂಬೆ ಕೊಂಬೆಗಳು ಬಜಾರ್‌ದಲ್ಲಿ ಅಂಗಡಿಗಳಿಗೆ ಸಂಪರ್ಕ ಇದ್ದ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಕಾರಣ ಅದನ್ನು ಭಾನುವಾರ ಹೆಸ್ಕಾಂ ಕಾರ್ಮಿಕರು ಸುರಿಯುವ ಮಳೆಯನ್ನೂ ಲೆಕ್ಕಿಸದೇ ತೆರವುಗೊಳಿಸುವ ಕಾರ್ಯ ಕೈಗೊಂಡರು.

ಪಟ್ಟಣದ ಮುಖ್ಯರಸ್ತೆಯಲ್ಲಿರುವ ಅಂಗಡಿಗಳಿಗೆ ಈ ಮರದ ಅಕ್ಕಪಕ್ಕದ ವಿದ್ಯುತ್ ಕಂಬಗಳಿಂದ ಸಂಪರ್ಕ ನೀಡಲಾಗಿದ್ದು ಮಳೆ, ಗಾಳಿ ಬಿಟ್ಟರೆ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಮರದ ರೆಂಬೆ ಕೊಂಬೆಗಳನ್ನು ಮರದ ಅರ್ಧ ಭಾಗವನ್ನು ಕತ್ತರಿಸಿ ವಿದ್ಯುತ್ ಪೂರೈಕೆಗೆ ಅಡಚಣೆಯಾಗಿದ್ದ ಮರದ ಬೃಹತ್ ರೆಂಬೆಯನ್ನು ತೆರವುಗೊಳಿಸಲಾಯಿತು.

ಸಂಜೆ ಸಮಯದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದರೂ ತಂತಿಗಳನ್ನು ಜೋಡಿಸುವ ಕಾರ್ಯವನ್ನು ಹೆಸ್ಕಾಂ ನೌಕರರು, ಗುತ್ತಿಗೆ ನೌಕರರು ಕೈಗೊಂಡರು. ಹೆಸ್ಕಾಂ ಪ್ರಭಾರ ಸೆಕ್ಷನ್ ಅಧಿಕಾರಿ ನಾಗರಾಜ ಬಸರಕೋಡ, ಗುತ್ತಿಗೆದಾರ ಅಪ್ಪುಗೌಡ ಮಾಡಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಮುದ್ದೇಬಿಹಾಳದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ