CLP Meeting

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ನಡುವೆ ಜಟಾಪಟಿ ನಡೆದಿರುವುದು ಬಹಿರಂಗವಾಗಿ ಎಲ್ಲೆಡೆ ಚರ್ಚೆಯಾಗುತ್ತಿದೆ. ಡಿಸಿಎಂ ಸೇರಿದಂತೆ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಜರಿದ್ದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮತ್ತು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡುಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್‌. ಬೋಸರಾಜು ನಡುವೆ ಉನ್ನತ ಪೊಲೀಸ್ ಅಧಿಕಾರಿಯೋರ್ವರ ವರ್ಗಾವಣೆ ಸಂಬಂಧಿಸಿದಂತೆ ಉಭಯ ಸಚಿವರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎರೆಡು ಬಣಗಳಿವೆ ಎಂಬುದು ಗುಟ್ಟಾಗಿ ಉಳಿದಿಲ್ಲ ಸರ್ಕಾರ ರಚನೆ ನಂತರ ಸಚಿವ ಸಂಪುಟದಲ್ಲಿ ಸೇರ್ಪಡೆ, ನಿಗಮ- ಮಂಡಳಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ, ನಾಮನಿರ್ದೇಶನ ಸದಸ್ಯರ, ಗ್ಯಾರಂಟಿ ಅನುಷ್ಟಾನ ಸಮಿತಿಯ ನೇಮಕ ಸಂದರ್ಭ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ ಎಷ್ಟರ ಮಟ್ಟಿಗೆ ಇದು ಮುಟ್ಟಿದೆ ಎಂದರೆ ಕಾರ್ಯಕ್ರಮವೊಂದರಲ್ಲಿ ಮಹಾನಗರ ಪಾಲಿಕೆ ಮಹಾಪೌರರ ಹೆಸರು ಹೇಳುವುದನ್ನು ಸಚಿವರು ಉದ್ಧೇಶ ಪೂರ್ವಕವಾಗಿ ಬಿಟ್ಟಿದ್ದಾರೆ ಎಂಬುದು ಅಸಮಾಧಾನಕ್ಕೆ ಆಸ್ಪದ ನೀಡಿತ್ತು.

ಅಡಿಯಿಂದ ಮುಡಿಯವರೆಗೆ ಬಣ ರಾಜಕೀಯ ಕಲಹ ನಡೆಯುತ್ತಾ ಸಾಗಿದೆ ಹೈಕಮಾಂಡ್ ಈ ಬಗ್ಗೆ ಅಸಹಾಯಕ ಸ್ಥಿತಿಯಲ್ಲಿದೆ ಎಂಬ ಅನುಮಾನ ಪಕ್ಷದ ತಟಸ್ಥ ಕಾರ್ಯಕರ್ತರಲ್ಲಿ ಮೂಡಿದೆ. ಬಣ ರಾಜಕೀಯಕ್ಕೆ ನಾಂದಿ ಹಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಪ್ರಮುಖ ಕಾರಣವಾಗಿದೆ ‌ಸ್ಥಳೀಯ ಸಚಿವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡದೆ ಅನ್ಯ ಜಿಲ್ಲೆಯವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದರಿಂದ ಬಣ ರಾಜಕೀಯ ಸಂಘರ್ಷ ಬೂದಿ ಮುಚ್ಚಿದ ಕೆಂಡದಂತಿದೆ ಕೆಲವೊಮ್ಮೆ ಅದು ಧಗಧಗನೆ ಉರಿಯುತ್ತದೆ.

ಬಣ ಬೆಂಕಿ ನಂದಿಸಲು ಸಾಧ್ಯವಾಗದೆ ಪಕ್ಷಕ್ಕೆ ಮುಜುಗರಕ್ಕೀಡು ಮಾಡುವ ಸನ್ನಿವೇಶ ಎದುರುಗಾತ್ತಿರುತ್ತದೆ ನಿನ್ನೆ ನಡೆದಿದೆ ಎನ್ನಲಾದ ಸಚಿವರ ನಡುವಿನ ಜಟಾಪಟಿಗೆ ವರ್ಗಾವಣೆ ಒಂದು ಕಾರಣವೆಂದು ಹೇಳಲಾಗುತ್ತಿದ್ದರೂ ಆಂತರಿಕವಾಗಿ ಜಿಲ್ಲೆಯಲ್ಲಿ ಹಿಡಿತ ಸಾಧಿಸುವುದಕ್ಕಾಗಿ ಎನ್ನುವುದು ರಾಜಕೀಯ ವಲಯದಿಂದ ಕೇಳಿಬರುತ್ತಿದೆ

Latest News

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಹುಣಸಗಿ : ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ನೌಕರರ ಸಂಘ

ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಬೆಂಗಳೂರು ಮೇ, 27: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ

ಶೇ.30-40 ರಷ್ಟು ಮಾತ್ರ ಬಾಕಿ: ಗುತ್ತಿಗೆದಾರರ ಬಿಲ್ ಕಾಂಗ್ರೆಸ್ ಸರ್ಕಾರ ಪಾವತಿಸಿದೆ- ಸಿ. ಬಿ. ಅಸ್ಕಿ

ಶೇ.30-40 ರಷ್ಟು ಮಾತ್ರ ಬಾಕಿ: ಗುತ್ತಿಗೆದಾರರ ಬಿಲ್ ಕಾಂಗ್ರೆಸ್ ಸರ್ಕಾರ ಪಾವತಿಸಿದೆ- ಸಿ. ಬಿ. ಅಸ್ಕಿ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಬಾಕಿ ಇರಿಸಿದ್ದ ಬಿಲ್‌ದಲ್ಲಿ ಶೇ.60ರಷ್ಟು ಕಾಂಗ್ರೆಸ್ ಸರ್ಕಾರ

ಮಹಿಳಾ ಕಾಂಗ್ರೆಸ್‌ಗೆ ಪಲ್ಲವಿ ನಾಡಗೌಡ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಪಲ್ಲವಿ ನಾಡಗೌಡ ನೇಮಕ

ಮುದ್ದೇಬಿಹಾಳ : ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಶಾಸಕ ನಾಡಗೌಡರ ಪುತ್ರಿ ಪಲ್ಲವಿ ನಾಡಗೌಡ ಅವರನ್ನು ಇಲ್ಲಿನ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಪದಾಧಿಕಾರಿಗಳು ಸೋಮವಾರ ಸನ್ಮಾನಿಸಿದರು. ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಪಾಟೀಲ, ನಿರ್ದೇಶಕರಾದ ಸತೀಶ ಓಸ್ವಾಲ,ಸಂಗನಗೌಡ ಬಿರಾದಾರ, ಮುಖಂಡರಾದ ಎ.ಗಣೇಶ ನಾರಾಯಣಸ್ವಾಮಿ ಇದ್ದರು.

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಆರೋಗ್ಯ ಸೇವೆ ಹಾಗೂ ಉನ್ನತ ಶಿಕ್ಷಣಗಳು ಉಚಿತವಾಗಿರಬೇಕು: ಸಚಿವ ಸಂತೋಷ್‌ ಲಾಡ್‌

ಬಡಜನರ ಶಿಕ್ಷಣ, ಆರೋಗ್ಯಕ್ಕೆ ಮಹತ್ವ ನೀಡಿದರೆ ಆರ್ಥಿಕ ಅಭಿವೃದ್ಧಿ ಮುಂದಿನ ಪೀಳಿಗೆಗೆ ನವೀಕರಣ ಆಗಿರುವ ಪಠ್ಯಪುಸ್ತಕ ಇಲ್ಲವೆಂದರೆ ಶೈಕ್ಷಣಿಕ ಸುಧಾರಣೆ ಅಸಾಧ್ಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಮತ ಧಾರವಾಡ, ಮೇ.26: ಉನ್ನತ ಶಿಕ್ಷಣವನ್ನು ಮತ್ತು ಆರೋಗ್ಯವನ್ನು ಉಚಿತವಾಗಿ ನೀಡಬೇಕು. ಬಡಜನರ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಅತಿ ಹೆಚ್ಚು ಮಹತ್ವ ನೀಡಿದರೆ ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಕಾರ್ಮಿಕ ಮತ್ತು ಜಿಲ್ಲಾ