CM, DCM high level meeting in Delhi.. What is the next step

ದೆಹಲಿಯಲ್ಲಿ CM, DCM ಉನ್ನತ ಮಟ್ಟದ ಸಭೆ.. ಮುಂದಿನ ನಡೆ ಏನು?

ದೆಹಲಿಯಲ್ಲಿ CM, DCM ಉನ್ನತ ಮಟ್ಟದ ಸಭೆ.. ಮುಂದಿನ ನಡೆ ಏನು?

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೂಡ ಪ್ರಕರಣದ ಕುರಿತು ಮಾತುಕತೆ ನಡೆಸಿದ್ದಾರೆ.

Join Our Telegram: https://t.me/dcgkannada

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಉಪಸ್ಥಿತರಿದ್ದರು.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆದ ಕುರಿತು, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಾಪಾಲರು ತನಿಖೆಗೆ ಅನುಮತಿ ನೀಡಿರುವ ಕುರಿತು ಮುಂದಿನ ಕಾನೂನು ನಡೆ ಬಗ್ಗೆ ಚರ್ಚಿಸಲಾಗಿದೆ. ಮುಡಾದಲ್ಲಿ ನನ್ನ ಪಾತ್ರವಿಲ್ಲ. ಕಾನೂನು ರೀತಿಯಲ್ಲಿ 14 ಸೈಟ್ ಪಡೆದಿದ್ದೇವೆ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೇ, ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಿಂದಿನ ಹಗರಣಗಳ ಕುರಿತಾಗಿ ಮತ್ತು ರಾಜ್ಯಪಾಲರ ಬಳಿ ದೋಸ್ತಿ ನಾಯಕರ ಕೆಲ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಬಾಕಿ ಇರುವ ಸಂಗತಿಗಳನ್ನು ರಾಜ್ಯ ನಾಯಕರು ವರಿಷ್ಠರಿಗೆ ವರದಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Who after modi? ಮೋದಿ ನಂತರ ಪ್ರಧಾನಿ ಯಾರು..? ಸಮೀಕ್ಷೆ ಬಹಿರಂಗ..!

ಇನ್ನು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಖಂಡಿಸಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನಡೆ ವಿರೋಧಿಸಿ ಕೈಗೊಂಡ ಸಂಪುಟ ನಿರ್ಣಯಗಳ ಬಗ್ಗೆ ವರಿಷ್ಠರಿಗೆ ರಾಜ್ಯ ನಾಯಕರು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ