CM Siddaramaiah instructs to release additional grant to Valmiki Development Corporation

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Join Our Telegram: https://t.me/dcgkannada

ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ ಐ ಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಇದನ್ನೂ ಓದಿ: Viral video: ಲಿಪ್ ಲಾಕ್ ಮಾಡಲು ಹೋಗಿ ಪ್ರಿಯತಮೆ ಬಾಯಿಯಲ್ಲಿ ವಾಂತಿ ಮಾಡಿದ..! (ವೈರಲ್ ವಿಡಿಯೋ ನೋಡಿ)

ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸೂಚನೆ ನೀಡಿದರು.

ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆಧ್ಯತೆಯಾಗಿದೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು.

ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ KAS ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ