CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah)ಗೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು, ಸಿಎಂ ಸಿದ್ದರಾಮಯ್ಯ‌(CM SIDDARAMAIAH) ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

Join our Telegram: https://t.me/dcgkannada

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ: Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ