CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah)ಗೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು, ಸಿಎಂ ಸಿದ್ದರಾಮಯ್ಯ‌(CM SIDDARAMAIAH) ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

Join our Telegram: https://t.me/dcgkannada

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ: Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ