ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ

ವಿಜಯಪುರ : ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರು ನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ನಗರದಲ್ಲಿ ಶುಕ್ರವಾರ 82 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ, 731 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕು ಸ್ಥಾಪನೆ, 56 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು.

ಕಿತ್ತೂರು ಚೆನ್ನಮ್ಮನವರು 1857 ರ ಸಿಪಾಯಿ ದಂಗೆಗೂ ಮುನ್ನ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿದ್ದರು.ಚೆನ್ನಮ್ಮ ಬ್ರಿಟೀಷರ ವಿರುದ್ದ ಛಲದಿಂದ ಹೋರಾಟ ಮಾಡಿ ಥ್ಯಾಕರೆಯನ್ನು ಸೋಲಿಸಿದ್ದರು.
ನಂತರ ಎರಡನೇ ಯುದ್ದದಲ್ಲಿ ಚೆನ್ನಮ್ಮ ಸೋತರು. ಅದಕ್ಕೆ ಕಾರಣ ನಮ್ಮವರೇ,
ಇನ್ನೂರು ವರ್ಷಗಳ ಕಾಲ ಬ್ರಿಟಿಷರು ನಮ್ಮನ್ನಾಳಲು ನಮ್ಮವರನ್ನೇ ಅಧೀನರನ್ನಾಗಿ ಮಾಡಿಕೊಂಡು ಆಳಿದರು.ಚೆನ್ನಮ್ಮನ ವಿಚಾರದಲ್ಲಿಯೂ ನಮ್ಮವರೇ ಅವರ ಸೋಲಿಗೆ ಕಾರಣವೆಂದು ಸಿಎಂ ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ವೆಲೋಡ್ರಮ್ ಲೋಕಾರ್ಪಣೆ ಮಾಡಿದ್ದೇವೆ.ಈ ಭಾಗದಲ್ಲಿ ಸೈಕ್ಲಿಸ್ಟ್ ಗಳು ಹೆಚ್ಚು. ಹಿಂದೆ 2013 -18 ರಲ್ಲಿ ಸಿಎಂ ಆಗಿದ್ದಾಗ ವೆಲೋಡ್ರಮ್‌ಗೆ ಶಿಲಾನ್ಯಾಸ ಮಾಡಿದ್ದೆ.ಇಂದು ವೆಲೋಡ್ರಮ್ ಉದ್ಘಾಟನೆ ನಾವೇ ಮಾಡಿದ್ದೇವೆ.ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಟ ಮಾಡಲಾಗಿದೆ.ಹಿಂದೆ ಬಿಜೆಪಿ ಸರ್ಕಾರ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿತ್ತು.ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ಸರ್ಕಾರಿ ಮೆಡಿಕಲ್ ಗೆ ಬೇಡಿಕೆ ಇಟ್ಟಿದ್ದರು.ನಮ್ಮ ಸರ್ಕಾರವೇ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತದೆ ಎಂದು ಘೋಷಣೆ ಮಾಡಿದರು.

ಯಾರೂ ಇದಕ್ಕಾಗಿ ಹೋರಾಟ ಮಾಡುವುದು ಅವಶ್ಯಕತೆಯಿಲ್ಲ.ಜಿಲ್ಲೆಯಲ್ಲಿ ಪಿಪಿಪಿ ಮಾಡೆಲ್ ಮೆಡಿಕಲ್ ಕಾಲೇಜು ಬೇಡ ಎಂದು ಹೋರಾಟ ಮಾಡುತ್ತಿದ್ದರು.ಹಿಂದಿನ ಬಿಜೆಪಿ ಸರ್ಕಾರ ಪಿಪಿಪಿ ಮಾಡೆಲ್ ಮೆಡಿಕಲ್ ಕಾಲೇಜು ಘೋಷಣೆ ಮಾಡಿತ್ತು.ಆದರೆ ನಾವು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದರು.
ನಿಮ್ಮಿಂದಲೇ ಕಳೆದ ಚುನಾವನೆಯಲ್ಲಿ 136 ಸ್ಥಾನ ಗೆದ್ದಿದ್ದು ಜಿಲ್ಲೆಯ 8 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ.ಅದರಿಂದಲೇ ನಾವು ಸರ್ಕಾರ ಮಾಡಲು ಸಾದ್ಯವಾಗಿದೆ.136 ಸ್ಥಾನ ಗೆಲ್ಲಲು ನಿಮ್ಮ ಆಶಿರ್ವಾದ ಕಾರಣವೆಂದ ಸಿಎಂ, 45 ವರ್ಷಗಳಿಂದ ರಾಜ್ಯ ಸುತ್ತಾಡುತ್ತಿದ್ದೇನೆ.ಹಲವಾರು ಬಾರಿ ವಿಜಯಪುರಕ್ಕೆ ಬಂದಿದ್ದೇನೆ ಬಂದಾಗ ನೀವು ಆಶೀರ್ವಾದ ಮಾಡಿದ್ದೀರಿ.ಇಂದು ಯತ್ನಾಳ ಹಲವಾರು ಬೇಡಿಕೆಗಳನ್ನು ನೀಡಿದ್ದಾರೆ.ನಗರದಲ್ಲಿ ಮೇಲ್ಸೇತುವೆಗೆ 162 ಕೋಟಿ ಹಣ ಕೇಳಿದ್ದಾರೆ.ಅದನ್ನು ಮಾಡಿಕೊಡುತ್ತೇನೆಂದು ಎಂದು ಸಿಎಂ ಘೋಷಣೆ ಮಾಡಿದರು.

ಕನಕದಾಸ ವೃತ್ತದಿಂದ ಶಿವಾಜಿ ಚೌಕ್‌ವರೆಗೂ ಮೇಲ್ಸೇತುವೆ ಮಾಡುತ್ತೇವೆ.7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದ ಅರಸು, ಅವರಿಗಿಂತ ಹೆಚ್ಚು ಕಾಲ ಸಿಎಂ ಆಗಿದ್ದೇನೆ.ಇದಕ್ಕೆ ನಿಮ್ಮೆಲ್ಲರ ಆಶಿರ್ವಾದ ಕಾಂಗ್ರೆಸ್ ಪಕ್ಷ ಸೋನಿಯಾ ಗಾಂಧಿ ಖರ್ಗೆ ಅವರ ಆಶಿರ್ವಾದ ಕಾರಣ.ಹೆಚ್ಚು ಕಾಲ ಸಿಎಂ ಆಗಲು ಜನರು ಕಾರಣ ಅದಕ್ಕಾಗಿ ಎಲ್ಲ ಜನರಿಗೆ ಅಭಿನಂದಿಸುತ್ತೇನೆ.ಜಿಲ್ಲೆಯ ಸಚಿವ ಎಂ ಬಿ ಪಾಟೀಲ ಹಾಗು ಇತರರು ನನಗೆ ಸನ್ಮಾನ ಮಾಡಿರೋ ಕಾರಣ ಅವರನ್ನೂ ಅಭಿನಂದಿಸುವೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ತಡವಾಗಿ ಬಂದ ಕಾರಣ ತಪ್ಪಾಗಿದೆ. ಇದಕ್ಕಾಗಿ ತಮ್ಮೆಲ್ಲರ ಕ್ಷಮೆ ಕೋರುತ್ತೇನೆ ಎಂದು ಹೇಳಿದರು.ಡಿಸಿಎಂ ಡಿ.ಕೆ.ಶಿವಕುಮಾರ,ಸಚಿವರಾದ ಎಂ.ಬಿ.ಪಾಟೀಲ,ಶಿವಾನAದ ಪಾಟೀಲ,ಡಾ.ಎಚ್.ಸಿ.ಮಹದೇವಪ್ಪ,ರಾಮಲಿಂಗಾರೆಡ್ಡಿ ಸೇರಿದಂತೆ ಜಿಲ್ಲೆಯ ಶಾಸಕರು,ಜನಪ್ರತಿನಿಧಿಗಳು,ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ