ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ

ವಿಜಯಪುರ : ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರು ನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ನಗರದಲ್ಲಿ ಶುಕ್ರವಾರ 82 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ, 731 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕು ಸ್ಥಾಪನೆ, 56 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು.

ಕಿತ್ತೂರು ಚೆನ್ನಮ್ಮನವರು 1857 ರ ಸಿಪಾಯಿ ದಂಗೆಗೂ ಮುನ್ನ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿದ್ದರು.ಚೆನ್ನಮ್ಮ ಬ್ರಿಟೀಷರ ವಿರುದ್ದ ಛಲದಿಂದ ಹೋರಾಟ ಮಾಡಿ ಥ್ಯಾಕರೆಯನ್ನು ಸೋಲಿಸಿದ್ದರು.
ನಂತರ ಎರಡನೇ ಯುದ್ದದಲ್ಲಿ ಚೆನ್ನಮ್ಮ ಸೋತರು. ಅದಕ್ಕೆ ಕಾರಣ ನಮ್ಮವರೇ,
ಇನ್ನೂರು ವರ್ಷಗಳ ಕಾಲ ಬ್ರಿಟಿಷರು ನಮ್ಮನ್ನಾಳಲು ನಮ್ಮವರನ್ನೇ ಅಧೀನರನ್ನಾಗಿ ಮಾಡಿಕೊಂಡು ಆಳಿದರು.ಚೆನ್ನಮ್ಮನ ವಿಚಾರದಲ್ಲಿಯೂ ನಮ್ಮವರೇ ಅವರ ಸೋಲಿಗೆ ಕಾರಣವೆಂದು ಸಿಎಂ ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ವೆಲೋಡ್ರಮ್ ಲೋಕಾರ್ಪಣೆ ಮಾಡಿದ್ದೇವೆ.ಈ ಭಾಗದಲ್ಲಿ ಸೈಕ್ಲಿಸ್ಟ್ ಗಳು ಹೆಚ್ಚು. ಹಿಂದೆ 2013 -18 ರಲ್ಲಿ ಸಿಎಂ ಆಗಿದ್ದಾಗ ವೆಲೋಡ್ರಮ್‌ಗೆ ಶಿಲಾನ್ಯಾಸ ಮಾಡಿದ್ದೆ.ಇಂದು ವೆಲೋಡ್ರಮ್ ಉದ್ಘಾಟನೆ ನಾವೇ ಮಾಡಿದ್ದೇವೆ.ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಟ ಮಾಡಲಾಗಿದೆ.ಹಿಂದೆ ಬಿಜೆಪಿ ಸರ್ಕಾರ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿತ್ತು.ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ಸರ್ಕಾರಿ ಮೆಡಿಕಲ್ ಗೆ ಬೇಡಿಕೆ ಇಟ್ಟಿದ್ದರು.ನಮ್ಮ ಸರ್ಕಾರವೇ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತದೆ ಎಂದು ಘೋಷಣೆ ಮಾಡಿದರು.

ಯಾರೂ ಇದಕ್ಕಾಗಿ ಹೋರಾಟ ಮಾಡುವುದು ಅವಶ್ಯಕತೆಯಿಲ್ಲ.ಜಿಲ್ಲೆಯಲ್ಲಿ ಪಿಪಿಪಿ ಮಾಡೆಲ್ ಮೆಡಿಕಲ್ ಕಾಲೇಜು ಬೇಡ ಎಂದು ಹೋರಾಟ ಮಾಡುತ್ತಿದ್ದರು.ಹಿಂದಿನ ಬಿಜೆಪಿ ಸರ್ಕಾರ ಪಿಪಿಪಿ ಮಾಡೆಲ್ ಮೆಡಿಕಲ್ ಕಾಲೇಜು ಘೋಷಣೆ ಮಾಡಿತ್ತು.ಆದರೆ ನಾವು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದರು.
ನಿಮ್ಮಿಂದಲೇ ಕಳೆದ ಚುನಾವನೆಯಲ್ಲಿ 136 ಸ್ಥಾನ ಗೆದ್ದಿದ್ದು ಜಿಲ್ಲೆಯ 8 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ.ಅದರಿಂದಲೇ ನಾವು ಸರ್ಕಾರ ಮಾಡಲು ಸಾದ್ಯವಾಗಿದೆ.136 ಸ್ಥಾನ ಗೆಲ್ಲಲು ನಿಮ್ಮ ಆಶಿರ್ವಾದ ಕಾರಣವೆಂದ ಸಿಎಂ, 45 ವರ್ಷಗಳಿಂದ ರಾಜ್ಯ ಸುತ್ತಾಡುತ್ತಿದ್ದೇನೆ.ಹಲವಾರು ಬಾರಿ ವಿಜಯಪುರಕ್ಕೆ ಬಂದಿದ್ದೇನೆ ಬಂದಾಗ ನೀವು ಆಶೀರ್ವಾದ ಮಾಡಿದ್ದೀರಿ.ಇಂದು ಯತ್ನಾಳ ಹಲವಾರು ಬೇಡಿಕೆಗಳನ್ನು ನೀಡಿದ್ದಾರೆ.ನಗರದಲ್ಲಿ ಮೇಲ್ಸೇತುವೆಗೆ 162 ಕೋಟಿ ಹಣ ಕೇಳಿದ್ದಾರೆ.ಅದನ್ನು ಮಾಡಿಕೊಡುತ್ತೇನೆಂದು ಎಂದು ಸಿಎಂ ಘೋಷಣೆ ಮಾಡಿದರು.

ಕನಕದಾಸ ವೃತ್ತದಿಂದ ಶಿವಾಜಿ ಚೌಕ್‌ವರೆಗೂ ಮೇಲ್ಸೇತುವೆ ಮಾಡುತ್ತೇವೆ.7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದ ಅರಸು, ಅವರಿಗಿಂತ ಹೆಚ್ಚು ಕಾಲ ಸಿಎಂ ಆಗಿದ್ದೇನೆ.ಇದಕ್ಕೆ ನಿಮ್ಮೆಲ್ಲರ ಆಶಿರ್ವಾದ ಕಾಂಗ್ರೆಸ್ ಪಕ್ಷ ಸೋನಿಯಾ ಗಾಂಧಿ ಖರ್ಗೆ ಅವರ ಆಶಿರ್ವಾದ ಕಾರಣ.ಹೆಚ್ಚು ಕಾಲ ಸಿಎಂ ಆಗಲು ಜನರು ಕಾರಣ ಅದಕ್ಕಾಗಿ ಎಲ್ಲ ಜನರಿಗೆ ಅಭಿನಂದಿಸುತ್ತೇನೆ.ಜಿಲ್ಲೆಯ ಸಚಿವ ಎಂ ಬಿ ಪಾಟೀಲ ಹಾಗು ಇತರರು ನನಗೆ ಸನ್ಮಾನ ಮಾಡಿರೋ ಕಾರಣ ಅವರನ್ನೂ ಅಭಿನಂದಿಸುವೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ತಡವಾಗಿ ಬಂದ ಕಾರಣ ತಪ್ಪಾಗಿದೆ. ಇದಕ್ಕಾಗಿ ತಮ್ಮೆಲ್ಲರ ಕ್ಷಮೆ ಕೋರುತ್ತೇನೆ ಎಂದು ಹೇಳಿದರು.ಡಿಸಿಎಂ ಡಿ.ಕೆ.ಶಿವಕುಮಾರ,ಸಚಿವರಾದ ಎಂ.ಬಿ.ಪಾಟೀಲ,ಶಿವಾನAದ ಪಾಟೀಲ,ಡಾ.ಎಚ್.ಸಿ.ಮಹದೇವಪ್ಪ,ರಾಮಲಿಂಗಾರೆಡ್ಡಿ ಸೇರಿದಂತೆ ಜಿಲ್ಲೆಯ ಶಾಸಕರು,ಜನಪ್ರತಿನಿಧಿಗಳು,ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ