HDK vs Siddaramaiah: Union Minister HD Kumaraswamy arrested?

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಇಂದು ಮತ್ತೆ ನಡೆಯಲಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿ ಗಳ ವಾದ ಮಂಡನೆಯಾಗಲಿದೆ.

ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ.

ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿ ಹೆಚ್ಚಾಗುತ್ತಿದೆ.

ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬ ಹುದು. ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು. ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ(CM Siddaramaiah) ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ವಲಯದಲ್ಲಿದೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ