HDK vs Siddaramaiah: Union Minister HD Kumaraswamy arrested?

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಇಂದು ಮತ್ತೆ ನಡೆಯಲಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿ ಗಳ ವಾದ ಮಂಡನೆಯಾಗಲಿದೆ.

ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ.

ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿ ಹೆಚ್ಚಾಗುತ್ತಿದೆ.

ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬ ಹುದು. ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು. ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ(CM Siddaramaiah) ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ವಲಯದಲ್ಲಿದೆ.

Latest News

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ