ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಇಂದು ಮತ್ತೆ ನಡೆಯಲಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿ ಗಳ ವಾದ ಮಂಡನೆಯಾಗಲಿದೆ.
ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ.
ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿ ಹೆಚ್ಚಾಗುತ್ತಿದೆ.
ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬ ಹುದು. ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು. ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ.
ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ(CM Siddaramaiah) ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ವಲಯದಲ್ಲಿದೆ.