HDK vs Siddaramaiah: Union Minister HD Kumaraswamy arrested?

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಇಂದು ಮತ್ತೆ ನಡೆಯಲಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿ ಗಳ ವಾದ ಮಂಡನೆಯಾಗಲಿದೆ.

ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ.

ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿ ಹೆಚ್ಚಾಗುತ್ತಿದೆ.

ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬ ಹುದು. ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು. ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ(CM Siddaramaiah) ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ವಲಯದಲ್ಲಿದೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ