Guarantee schemes CM Siddaramaiah guarantee for guarantee schemes

CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

ಬೆಂಗಳೂರು: ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು,‌ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆ​ಗೆ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಏತನ್ಮಧ್ಯೆ, ಆಗಸ್ಟ್ 23ರಂದು ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಳ್ಳಲು ಸಿದ್ಧರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Join Our telegram: https://t.me/dcgkannada

ಸಿದ್ದರಾಮಯ್ಯ‌ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಒಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ, ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ.

ನಾಳೆ(ಆಗಸ್ಟ್​ 19) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದು ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ಹೈಕಮಾಂಡ್​ ನಾಯಕರ ಜೊತೆ ಚರ್ಚಿಸಲಿದ್ದಾರೆ ತಮ್ಮ ವಿರುದ್ಧ ಬಂದಿರುವ ಆರೋಪದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರ ಭೇಟಿಗೆ ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ರಾಜ್ಯಪಾಲರ ನಡೆ ವಿರುದ್ಧ ದೂರು ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

Latest News

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಯಶಸ್ಸು ಸಾಧ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು. ಪಟ್ಟಣದ ವಿದ್ಯಾಚೇತನ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಸೂಕ್ತವಾದ ಪ್ರತಿಭೆಯನ್ನು ಗುರುತಿಸಿ ಪೂರಕವಾದ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಕರು ಮಗುವಿನ ಮೌಲ್ಯಮಾಪನ ಕಾರ್ಯ ನಿರಂತರ ಮಾಡಬೇಕು ಎಂದರು. ಕುAಟೋಜಿ