BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

ಮೈಸೂರು: ರಾಜಕೀಯ ಲಾಭಕ್ಕಾಗಿ BJP-JDS ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

BJP-JDSನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಈ ರೀತಿ ಪ್ರತಿಕ್ರಿಯೆ ನೀಡಿದರು.

Join Our Telegram: https://t.me/dcgkannada

ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ಇದನ್ನೂ ಓದಿ: CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ

ರಾಜಕೀಯವಾಗಿ ಮಣಿಸಲು BJP JDS ತಂತ್ರ: ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುಳ್ಳು ಆರೋಪಗಳ ವಿರುದ್ಧ ಹೋರಾಟ:
ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ, ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ