Collector's visit to Muddebihal: Notice to provide better service to public

ಮುದ್ದೇಬಿಹಾಳಕ್ಕೆ ಜಿಲ್ಲಾಧಿಕಾರಿಗಳ ಪ್ರವಾಸ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸೂಚನೆ

ಮುದ್ದೇಬಿಹಾಳಕ್ಕೆ ಜಿಲ್ಲಾಧಿಕಾರಿಗಳ ಪ್ರವಾಸ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸೂಚನೆ

ಮುದ್ದೇಬಿಹಾಳ : ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒಳ್ಳೆಯ ಸೇವೆ ನೀಡಬೇಕು. ಸಮಯ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಆನಂದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದ ಅವರು ಅಲ್ಲಿನ ಆಡಳಿತ ವೈದ್ಯಾಧಿಕಾರಿ ಡಾ. ಅನಿಲಕುಮಾರ ಶೇಗುಣಸಿ ಅವರಿಂದ ಆಸ್ಪತ್ರೆಯ ಕುರಿತು ಮಾಹಿತಿ ಪಡೆದುಕೊಂಡರು. ಗರ್ಭಿಣಿಯರು, ಬಾಣಂತಿಯರು, ಔಷಧಿ ವಿಭಾಗ, ಹೊರರೋಗಿಗಳ ವಿಭಾಗ ಸೇರಿದಂತೆ ಹಲವು ಕಡೆಗಳಲ್ಲಿ ಸುತ್ತಾಡಿದ ಡಿಸಿ ಅವರು ಆಸ್ಪತ್ರೆಯ ಸ್ವಚ್ಛತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದಲ್ಲದೇ ಮುದ್ದೇಬಿಹಾಳ ಪಟ್ಟಣದ ತಹಸೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು ಭೂಮಿ ಕೇಂದ್ರದ ಪ್ರಗತಿ, ಪೌತಿ ಆಂದೋಲನ ಮಾಹಿತಿ, ಸಕಾಲ ಅರ್ಜಿಗಳ ಪ್ರಗತಿ ಹಾಗೂ ಇ ಆಫೀಸ್ ಅರ್ಜಿಗಳ ಪ್ರಗತಿ ಕುರಿತು ಪರಿಶೀಲಿಸಿದರು. ಪ್ರಭಾರ ತಹಸೀಲ್ದಾರ್ ಎ.ಡಿ.ಅಮರವಾದಗಿ ಡಿಸಿ ಅವರಿಗೆ ಮಾಹಿತಿ ನೀಡಿದರು.

ಕಂದಾಯ ದಾಖಲೆಗಳ ಗಣಕೀಕರಣ ಕೊಠಡಿಗೆ ತೆರಳಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಬಗ್ಗೆ ಪರಿಶೀಲನೆ ನಡೆಸಿದರಲ್ಲದೇ ಸಾರ್ವಜನಿಕರಿಗೆ ಬೇಕಾಗುವ ದಾಖಲೆಗಳನ್ನು ಶೀಘ್ರದಲ್ಲಿ ಅನುಕೂಲ ಆಗುವಹಾಗೆ ವ್ಯವಸ್ಥೆ ಮಾಡಬೇಕು ಎಂದು ತಹಸೀಲ್ದಾರ್‌ಗೆ ತಿಳಿಸಿದರು.

ಪಟ್ಟಣದ ಮಾರುತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ, ಕೊಠಡಿ, ಊಟದ ಕೋಣೆ, ಅಡುಗೆ ಕೋಣೆ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ವಿದ್ಯಾರ್ಥಿಗಳಿಂದ ಹಾಸ್ಟೆಲ್ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು. ಪುರಸಭೆಗೆ ಭೇಟಿ ನೀಡಿದ್ದ ಡಿಸಿ ಅವರು ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಂದ ಮಾಹಿತಿ ಪಡೆದುಕೊಂಡರು.
ಕಂದಾಯ ನಿರೀಕ್ಷಕ ಡಿ. ಎಸ್. ತಳವಾರ, ವೈದ್ಯರಾದ ಡಾ. ಪರಶುರಾಮ ವಡ್ಡರ, ಡಾ.ಹರಿರಾಮಕೃಷ್ಣ, ಡಾ.ಅಬ್ದುಲ್ ಮೊದಲಾದವರು ಇದ್ದರು.

Latest News

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ

ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಕೀರ್ತಿ ಚಾಲಕ್ ನೂತನ ತಹಸೀಲ್ದಾರ್ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ನೂತನ ತಹಸೀಲ್ದಾರ್ ಕೀರ್ತಿ ಚಾಲಕ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಅವರನ್ನು ನಿಡಗುಂದಿ ತಹಸೀಲ್ದಾರ್ ಎ.ಡಿ.ಅಮರವಾದಗಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ, ಕಂದಾಯ ನಿರೀಕ್ಷಕ ಶ್ರೀನಿವಾಸ ಹುನಗುಂದ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಮನೋಜ ರಾಠೋಡ, ಪದಾಧಿಕಾರಿಗಳಾದ ರಿಯಾಜ್ ನಾಯ್ಕೋಡಿ, ಆರ್.ಎಸ್.ಹೊಸೂರ, ಎ.ಎಸ್.ಬಾಬಾನಗರ ಇದ್ದರು. ಈ ಮುಂಚೆ ತಾಳಿಕೋಟಿ ತಾಲ್ಲೂಕು ತಹಸೀಲ್ದಾರ್ ಆಗಿ ಸೇವೆ