Come tomorrow Adapurakka.. Rajugowda Patil rants in one sentence

ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತ್ತಿದ್ದೇನೆ.. ಬಾ ನಾಳೆ ಆದಾಪೂರಕ್ಕ.. ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ (ವಿಡಿಯೋ ನೋಡಿ)

ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತ್ತಿದ್ದೇನೆ.. ಬಾ ನಾಳೆ ಆದಾಪೂರಕ್ಕ.. ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ (ವಿಡಿಯೋ ನೋಡಿ)

ಇಳಕಲ್: “** ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತ್ತಿದ್ದೇನೆ” ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ಮಗನಾದ ರಾಜುಗೌಡ ಪಾಟೀಲ್ ಅವರು ಸವಾಲು ಹಾಕಿದರು.

Join Our Telegram: https://t.me/dcgkannada

ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ಸಾಮಾಜಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.

“ಇಂದು ನಾನು ರಾಜಕೀಯ ಮಾತನಾಡಲು ಬಂದಿರಲಿಲ್ಲ. ಆದರೆ, ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಸುದ್ದಿಗೋಷ್ಠಿಯಲ್ಲಿ ನಮ್ಮ ತಂದೆಯವರಿಗೆ ದೊಡ್ಡನಗೌಡ ನೀ ದಡ್ಡ ಎಂದು ನಿಂದಿಸಿದ ಕಾರಣ ರಾಜಕೀಯ ಮಾತನಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ” ಎಂದು ಮಾತು ಆರಂಭಿಸಿದರು.

“ನಾವು ಇಳಕಲ್ ನಲ್ಲಿ ಇರುವವರು. ಬಾಯಿಗೆ ಬಂದಂಗ ಮಾತನಾಡಿದರೆ ಸುಮ್ಮನೆ ಕೂರಲು ಆಗಲ್ಲ. ಇನ್ನು ಮುಂದೆ ನೀ ಬೊಗಳು.. ನಾನು ನೋಡ್ತಿನಿ…” ಎಂದು ಎಚ್ಚರಿಕೆ ರೀತಿ ಮಾತನಾಡಿದರು.

“ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಬಾಯಿಗೆ ಬಂದಂಗ ಮಾತನಾಡುತ್ತಾ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಯಾ? ನಾಳೆ‌ ಚಿಕ್ಕ ಆದಾಪೂರ ಗ್ರಾಮಕ್ಕೆ ಬರ್ತಿಯಲ್ಲ… ಬಾ.. ಏನು ಮಾಡ್ತಿ ನೋಡ್ತಿವಿ” ಎಂದು ಗುಡುಗಿದರು.

ವಾಗ್ವಾದಕ್ಕೆ ಕಾರಣ ಏನು?

ಇಳಕಲ್ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಂತರ ಶಾಸಕರು ಮತ್ತು ಮಾಜಿ‌ ಶಾಸಕರ ನಡುವಿನ ವಾಕ್ಸಮರ ಜೋರಾಗಿದೆ. ಈಗ ಮಾಜಿ ಶಾಸಕ ದೊಡ್ಡನಗೌಡ ಅವರ ಮಗನೂ ಮಾತಿನ ಮಲ್ಲ ಯುದ್ಧಕ್ಕೆ ಮತ್ತೆ ಪ್ರವೇಶವನ್ನು ಚಿಕ್ಕ ಆದಾಪೂರ ಗ್ರಾಮದಿಂದ‌ ಮಾಡಿದ್ದಾರೆ.

ಬಿಜೆಪಿ ನಾಯಕತ್ವ ಯಾರದ್ದು?

ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೂ ಹೀಗೆ ಮಾತಿನ ಯುದ್ಧ ನಡೆಸಿದ್ದ ಕಾಶಪ್ಪನವರ ಮತ್ತು ದೊಡ್ಡನಗೌಡ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ಸು ಕಂಡಿದ್ದರು. ಈಗ ತಾಲೂಕು ಬಿಜೆಪಿ ನಾಯಕತ್ವ ಚರ್ಚೆ ಜೋರಾಗಿರುವಾಗಲೇ ಮಾಜಿ ಶಾಸಕರು ತಮ್ಮ ಮಗನನ್ನು ಮತ್ತೆ ಮುನ್ನೆಲೆಗೆ ತರಲು ಮುಂದಾಗಿದ್ದಾರಾ ಎಂಬ ಚರ್ಚೆ ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಏತನ್ಮಧ್ಯೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರಿಸಿದ ನಂತರ ಎಸ್. ಆರ್. ನವಲಿಹಿರೇಮಠ ಅವರೂ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಬಿಜೆಪಿ ನಾಯಕತ್ವ ಯಾರ ಬಳಿ ಉಳಿಯುತ್ತದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600