Competition on the occasion of Gramdevate Jatra: Cash prize for Rangoli competition winners

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ ಹೊರಗಿನಮಠ ಐದನೇ ಬಹುಮಾನ ಪಡೆದುಕೊಂಡರು. ಪ್ರಶಸ್ತಿ ವಿಜೇತರಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಬಹುಮಾನ ಪ್ರದಾನ ಮಾಡಿದರು.

ಪುರಸಭೆ ಸದಸ್ಯರಾದ ಪ್ರತಿಭಾ ಅಂಗಡಗೇರಿ, ಶಹಜಾದಬಿ ಹುಣಸಗಿ, ಸಂಗಮ್ಮ ದೇವರಳ್ಳಿ, ಭಾರತಿ ಪಾಟೀಲ, ಅಶೋಕ ವನಹಳ್ಳಿ, ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಮಂಜುಳಾ ಕೆಸರಟ್ಟಿ, ನಿವೃತ್ತ ದೈಹಿಕ ಶಿಕ್ಷಕ ಎಸ್. ಎಲ್. ಗುರವ, ತೀರ್ಪುಗಾರರಾದ ವಿದ್ಯಾ ತಡಸದ, ರೇಖಾ ಇಲ್ಲೂರ, ಡಿ.ಬಿ.ಮಟ್ಟಿಕಲ್ಲ ಇದ್ದರು.

ಫಲಿತಾಂಶದಲ್ಲಿ ತಾರತಮ್ಯ: ನಿರ್ಣಾಯಕರು ಅಂದವಾದ ರಂಗೋಲಿಯನ್ನು ವೀಕ್ಷಿಸಿ ತೀರ್ಪು ನೀಡದೇ ತಮಗೆ ಬೇಕಾದವರಿಗೆ ತೀರ್ಪು ನೀಡಿ ತಾರತಮ್ಯ ಮಾಡಿದ್ದಾರೆ ಎಂದು ಮಾರುತಿ ನಗರದಿಂದ ಸ್ಪರ್ಧೆಗೆ ಆಗಮಿಸಿದ್ದ ಲತಾ ಪೀರಾಪೂರ ದೂರಿದರು. ಸ್ಪರ್ಧೆಯ ನಿಯಮಗಳನ್ನು ಹಾಗೂ ಬಳಸಬೇಕಾದ ಆಕೃತಿಯ ಬಗ್ಗೆ ಮುಂಚಿತವಾಗಿ ತಿಳಿಸಿರಲಿಲ್ಲ. ಆದರೂ ಆಯ್ಕೆಯಾಗದವರು ತಮ್ಮ ರಂಗೋಲಿಗೆ ಏಕೆ ಬಹುಮಾನ ಬಂದಿಲ್ಲ ಎಂದು ಪ್ರಶ್ನಿಸಿದರೆ ನಿರ್ಣಾಯಕರಿಂದ ಸಮರ್ಪಕ ಉತ್ತರ ಬರಲಿಲ್ಲ. ಇದು ನಮಗೆ ಅನುಮಾನಗಳಿಗೆ ಕಾರಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪುಗಾರರನ್ನು ಪ್ರಶ್ನಿಸಿದಾಗ, ರಂಗೋಲಿಯ ಆಕೃತಿ, ಚುಕ್ಕಿಗಳ ಇಡುವಿಕೆ ಹಾಗೂ ಬಣ್ಣದ ಅಂದವನ್ನು ಗಮನಿಸಿ ಆಯ್ಕೆ ಮಾಡಿದ್ದು ಇದರಲ್ಲಿ ಯಾವುದೇ ತಾರತಮ್ಮ ಮಾಡಿಲ್ಲ ಎಂದು ನಿರ್ಣಾಯಕರಾಗಿ ಬಂದಿದ್ದ ವಿದ್ಯಾ ತಡಸದ, ರೇಖಾ ಇಲ್ಲೂರ ಸ್ಪಷ್ಪಪಡಿಸಿದರು.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ