Competition on the occasion of Gramdevate Jatra: Cash prize for Rangoli competition winners

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ ಹೊರಗಿನಮಠ ಐದನೇ ಬಹುಮಾನ ಪಡೆದುಕೊಂಡರು. ಪ್ರಶಸ್ತಿ ವಿಜೇತರಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಬಹುಮಾನ ಪ್ರದಾನ ಮಾಡಿದರು.

ಪುರಸಭೆ ಸದಸ್ಯರಾದ ಪ್ರತಿಭಾ ಅಂಗಡಗೇರಿ, ಶಹಜಾದಬಿ ಹುಣಸಗಿ, ಸಂಗಮ್ಮ ದೇವರಳ್ಳಿ, ಭಾರತಿ ಪಾಟೀಲ, ಅಶೋಕ ವನಹಳ್ಳಿ, ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಮಂಜುಳಾ ಕೆಸರಟ್ಟಿ, ನಿವೃತ್ತ ದೈಹಿಕ ಶಿಕ್ಷಕ ಎಸ್. ಎಲ್. ಗುರವ, ತೀರ್ಪುಗಾರರಾದ ವಿದ್ಯಾ ತಡಸದ, ರೇಖಾ ಇಲ್ಲೂರ, ಡಿ.ಬಿ.ಮಟ್ಟಿಕಲ್ಲ ಇದ್ದರು.

ಫಲಿತಾಂಶದಲ್ಲಿ ತಾರತಮ್ಯ: ನಿರ್ಣಾಯಕರು ಅಂದವಾದ ರಂಗೋಲಿಯನ್ನು ವೀಕ್ಷಿಸಿ ತೀರ್ಪು ನೀಡದೇ ತಮಗೆ ಬೇಕಾದವರಿಗೆ ತೀರ್ಪು ನೀಡಿ ತಾರತಮ್ಯ ಮಾಡಿದ್ದಾರೆ ಎಂದು ಮಾರುತಿ ನಗರದಿಂದ ಸ್ಪರ್ಧೆಗೆ ಆಗಮಿಸಿದ್ದ ಲತಾ ಪೀರಾಪೂರ ದೂರಿದರು. ಸ್ಪರ್ಧೆಯ ನಿಯಮಗಳನ್ನು ಹಾಗೂ ಬಳಸಬೇಕಾದ ಆಕೃತಿಯ ಬಗ್ಗೆ ಮುಂಚಿತವಾಗಿ ತಿಳಿಸಿರಲಿಲ್ಲ. ಆದರೂ ಆಯ್ಕೆಯಾಗದವರು ತಮ್ಮ ರಂಗೋಲಿಗೆ ಏಕೆ ಬಹುಮಾನ ಬಂದಿಲ್ಲ ಎಂದು ಪ್ರಶ್ನಿಸಿದರೆ ನಿರ್ಣಾಯಕರಿಂದ ಸಮರ್ಪಕ ಉತ್ತರ ಬರಲಿಲ್ಲ. ಇದು ನಮಗೆ ಅನುಮಾನಗಳಿಗೆ ಕಾರಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪುಗಾರರನ್ನು ಪ್ರಶ್ನಿಸಿದಾಗ, ರಂಗೋಲಿಯ ಆಕೃತಿ, ಚುಕ್ಕಿಗಳ ಇಡುವಿಕೆ ಹಾಗೂ ಬಣ್ಣದ ಅಂದವನ್ನು ಗಮನಿಸಿ ಆಯ್ಕೆ ಮಾಡಿದ್ದು ಇದರಲ್ಲಿ ಯಾವುದೇ ತಾರತಮ್ಮ ಮಾಡಿಲ್ಲ ಎಂದು ನಿರ್ಣಾಯಕರಾಗಿ ಬಂದಿದ್ದ ವಿದ್ಯಾ ತಡಸದ, ರೇಖಾ ಇಲ್ಲೂರ ಸ್ಪಷ್ಪಪಡಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ