Competition on the occasion of Gramdevate Jatra: Cash prize for Rangoli competition winners

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ ಹೊರಗಿನಮಠ ಐದನೇ ಬಹುಮಾನ ಪಡೆದುಕೊಂಡರು. ಪ್ರಶಸ್ತಿ ವಿಜೇತರಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಬಹುಮಾನ ಪ್ರದಾನ ಮಾಡಿದರು.

ಪುರಸಭೆ ಸದಸ್ಯರಾದ ಪ್ರತಿಭಾ ಅಂಗಡಗೇರಿ, ಶಹಜಾದಬಿ ಹುಣಸಗಿ, ಸಂಗಮ್ಮ ದೇವರಳ್ಳಿ, ಭಾರತಿ ಪಾಟೀಲ, ಅಶೋಕ ವನಹಳ್ಳಿ, ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಮಂಜುಳಾ ಕೆಸರಟ್ಟಿ, ನಿವೃತ್ತ ದೈಹಿಕ ಶಿಕ್ಷಕ ಎಸ್. ಎಲ್. ಗುರವ, ತೀರ್ಪುಗಾರರಾದ ವಿದ್ಯಾ ತಡಸದ, ರೇಖಾ ಇಲ್ಲೂರ, ಡಿ.ಬಿ.ಮಟ್ಟಿಕಲ್ಲ ಇದ್ದರು.

ಫಲಿತಾಂಶದಲ್ಲಿ ತಾರತಮ್ಯ: ನಿರ್ಣಾಯಕರು ಅಂದವಾದ ರಂಗೋಲಿಯನ್ನು ವೀಕ್ಷಿಸಿ ತೀರ್ಪು ನೀಡದೇ ತಮಗೆ ಬೇಕಾದವರಿಗೆ ತೀರ್ಪು ನೀಡಿ ತಾರತಮ್ಯ ಮಾಡಿದ್ದಾರೆ ಎಂದು ಮಾರುತಿ ನಗರದಿಂದ ಸ್ಪರ್ಧೆಗೆ ಆಗಮಿಸಿದ್ದ ಲತಾ ಪೀರಾಪೂರ ದೂರಿದರು. ಸ್ಪರ್ಧೆಯ ನಿಯಮಗಳನ್ನು ಹಾಗೂ ಬಳಸಬೇಕಾದ ಆಕೃತಿಯ ಬಗ್ಗೆ ಮುಂಚಿತವಾಗಿ ತಿಳಿಸಿರಲಿಲ್ಲ. ಆದರೂ ಆಯ್ಕೆಯಾಗದವರು ತಮ್ಮ ರಂಗೋಲಿಗೆ ಏಕೆ ಬಹುಮಾನ ಬಂದಿಲ್ಲ ಎಂದು ಪ್ರಶ್ನಿಸಿದರೆ ನಿರ್ಣಾಯಕರಿಂದ ಸಮರ್ಪಕ ಉತ್ತರ ಬರಲಿಲ್ಲ. ಇದು ನಮಗೆ ಅನುಮಾನಗಳಿಗೆ ಕಾರಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪುಗಾರರನ್ನು ಪ್ರಶ್ನಿಸಿದಾಗ, ರಂಗೋಲಿಯ ಆಕೃತಿ, ಚುಕ್ಕಿಗಳ ಇಡುವಿಕೆ ಹಾಗೂ ಬಣ್ಣದ ಅಂದವನ್ನು ಗಮನಿಸಿ ಆಯ್ಕೆ ಮಾಡಿದ್ದು ಇದರಲ್ಲಿ ಯಾವುದೇ ತಾರತಮ್ಮ ಮಾಡಿಲ್ಲ ಎಂದು ನಿರ್ಣಾಯಕರಾಗಿ ಬಂದಿದ್ದ ವಿದ್ಯಾ ತಡಸದ, ರೇಖಾ ಇಲ್ಲೂರ ಸ್ಪಷ್ಪಪಡಿಸಿದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ