Competition on the occasion of Gramdevate Jatra: Cash prize for Rangoli competition winners

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ ಹೊರಗಿನಮಠ ಐದನೇ ಬಹುಮಾನ ಪಡೆದುಕೊಂಡರು. ಪ್ರಶಸ್ತಿ ವಿಜೇತರಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಬಹುಮಾನ ಪ್ರದಾನ ಮಾಡಿದರು.

ಪುರಸಭೆ ಸದಸ್ಯರಾದ ಪ್ರತಿಭಾ ಅಂಗಡಗೇರಿ, ಶಹಜಾದಬಿ ಹುಣಸಗಿ, ಸಂಗಮ್ಮ ದೇವರಳ್ಳಿ, ಭಾರತಿ ಪಾಟೀಲ, ಅಶೋಕ ವನಹಳ್ಳಿ, ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಮಂಜುಳಾ ಕೆಸರಟ್ಟಿ, ನಿವೃತ್ತ ದೈಹಿಕ ಶಿಕ್ಷಕ ಎಸ್. ಎಲ್. ಗುರವ, ತೀರ್ಪುಗಾರರಾದ ವಿದ್ಯಾ ತಡಸದ, ರೇಖಾ ಇಲ್ಲೂರ, ಡಿ.ಬಿ.ಮಟ್ಟಿಕಲ್ಲ ಇದ್ದರು.

ಫಲಿತಾಂಶದಲ್ಲಿ ತಾರತಮ್ಯ: ನಿರ್ಣಾಯಕರು ಅಂದವಾದ ರಂಗೋಲಿಯನ್ನು ವೀಕ್ಷಿಸಿ ತೀರ್ಪು ನೀಡದೇ ತಮಗೆ ಬೇಕಾದವರಿಗೆ ತೀರ್ಪು ನೀಡಿ ತಾರತಮ್ಯ ಮಾಡಿದ್ದಾರೆ ಎಂದು ಮಾರುತಿ ನಗರದಿಂದ ಸ್ಪರ್ಧೆಗೆ ಆಗಮಿಸಿದ್ದ ಲತಾ ಪೀರಾಪೂರ ದೂರಿದರು. ಸ್ಪರ್ಧೆಯ ನಿಯಮಗಳನ್ನು ಹಾಗೂ ಬಳಸಬೇಕಾದ ಆಕೃತಿಯ ಬಗ್ಗೆ ಮುಂಚಿತವಾಗಿ ತಿಳಿಸಿರಲಿಲ್ಲ. ಆದರೂ ಆಯ್ಕೆಯಾಗದವರು ತಮ್ಮ ರಂಗೋಲಿಗೆ ಏಕೆ ಬಹುಮಾನ ಬಂದಿಲ್ಲ ಎಂದು ಪ್ರಶ್ನಿಸಿದರೆ ನಿರ್ಣಾಯಕರಿಂದ ಸಮರ್ಪಕ ಉತ್ತರ ಬರಲಿಲ್ಲ. ಇದು ನಮಗೆ ಅನುಮಾನಗಳಿಗೆ ಕಾರಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪುಗಾರರನ್ನು ಪ್ರಶ್ನಿಸಿದಾಗ, ರಂಗೋಲಿಯ ಆಕೃತಿ, ಚುಕ್ಕಿಗಳ ಇಡುವಿಕೆ ಹಾಗೂ ಬಣ್ಣದ ಅಂದವನ್ನು ಗಮನಿಸಿ ಆಯ್ಕೆ ಮಾಡಿದ್ದು ಇದರಲ್ಲಿ ಯಾವುದೇ ತಾರತಮ್ಮ ಮಾಡಿಲ್ಲ ಎಂದು ನಿರ್ಣಾಯಕರಾಗಿ ಬಂದಿದ್ದ ವಿದ್ಯಾ ತಡಸದ, ರೇಖಾ ಇಲ್ಲೂರ ಸ್ಪಷ್ಪಪಡಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ