COMUL Special General Assembly is a platform for MLA's open fight

ಶಾಸಕರ ಬಹಿರಂಗ ಕಾದಾಟಕ್ಕೆ ವೇದಿಕೆಯಾದ ಕೋಮುಲ್ ವಿಶೇಷ ಸಾಮಾನ್ಯ ಸಭೆ

ಶಾಸಕರ ಬಹಿರಂಗ ಕಾದಾಟಕ್ಕೆ ವೇದಿಕೆಯಾದ ಕೋಮುಲ್ ವಿಶೇಷ ಸಾಮಾನ್ಯ ಸಭೆ

Ad
Ad

ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈ-ಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.

Ad
Ad

ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.

ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್. ಎನ್. ನಾರಾಯಣಸ್ವಾಮಿ ಮತ್ತು ಕೆ. ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.

ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.

ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.

ಕೋಲಾರ ಜಿಲ್ಲೆಯ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಕ್ಷೇತ್ರ ವಿಂಗಡಣೆಗೆ ಡೇರಿ ಅಧ್ಯಕ್ಷರ ಸಹಕಾರದಿಂದ ಅನುಮೋದನೆ ಸಿಕ್ಕಿದೆ, ಆದರೆ ಕೆಲವರು ದುರದ್ದೇಶದಿಂದ ವಿಶೇಷ ಸಾಮಾನ್ಯ ಸಭೆಯಲ್ಲಿ ಗೊಂದಲ ಸೃಷ್ಟಿ ಮಾಡಿ ಕೋರಂ ಕೊರತೆ ಇಲ್ಲದಂತೆ ಮಾಡಲು ಮುಂದಾಗಿದ್ದರು ಇದು ಕಾನೂನು ವ್ಯಾಪ್ತಿಯಲ್ಲಿ ನಡೆದಿದೆ ಚುನಾವಣೆ ನಡೆಸುವ ಅಧಿಕಾರ ಅಧಿಕಾರಿಗಳಿಗಿದೆ ಮುಂದಿನ ಮೂರು ತಿಂಗಳೊಳಗೆ ಹೊಸ ಆಡಳಿತ ಮಂಡಳಿ ಬರಲಿದೆ.

ಕೋಮುಲ್ ವಿಶೇಷ ಸಾಮಾನ್ಯ ಸಭೆಯು ಅಧಿಕಾರಿಗಳಿಗೆ ಒತ್ತಡ ತಂದು ಕೆಲವರು ಏಕಪಕ್ಷೀಯವಾಗಿ ನಡೆದುಕೊಂಡಿದ್ದಾರೆ ಇವತ್ತು ಅನುಮೋದನೆ ಸರಿಯಾದ ರೀತಿಯಲ್ಲಿ ನಡೆದಿಲ್ಲ ಸಭೆಯ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಜೊತೆಗೆ ಕೋರ್ಟ್ ಮೊರೆ ಹೋಗಲಾಗುತ್ತದೆ.
ಶಾಸಕ ಎಸ್.ಎನ್ ನಾರಾಯಣಸ್ವಾಮಿ.

Latest News

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ಮುದ್ದೇಬಿಹಾಳ : ಸಮಾಜಕ್ಕೆ ಪ್ರೇರಣೆಯಾಗುವ ಸೇವೆಯನ್ನು ನಾವೆಲ್ಲ ಮಾಡಬೇಕು ಎಂದು ಕರ್ನಾಟಕ ಕೋ ಆಪರೇಟಿವ್

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ಮುದ್ದೇಬಿಹಾಳ : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ರಂಭಾಪುರಿ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾಧೀಶರು

ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಹಸಿರು ತೋರಣ ಗೆಳೆಯರ ಬಳಗದ ಕಾಳಜಿ:ಪಕ್ಷಿಗಳಿಗೆ ನೀರು ಇಡೋಣ

ಮುದ್ದೇಬಿಹಾಳ: ಬೇಸಿಗೆ ಕಾಲದಲ್ಲಿ ನೀರಿಗಾಗಿ ಪ್ರಾಣಿ, ಪಕ್ಷಿಗಳು ಬಹಳಷ್ಟು ಪರದಾಡಿ ಜೀವ ಕಳೆದುಕೊಳ್ಳುವ ಸಾಧ್ಯತೆ

ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ಮಕ್ಕಳ ಕಲಿಕೆಗೆ ಸಾಮಗ್ರಿ ಸಹಕಾರಿ-ಕುಪ್ಪಸ್ತ

ನಿಡಗುಂದಿ : ಕಲಿಕಾ ಸಾಮಗ್ರಿ ಸರ್ಕಾರಿ ಶಾಲೆಗಳ ಬಡ ಮಕ್ಕಳ ಕಲಿಕೆಗೆ ಸಹಕಾರಿಯಾಗಿವೆ ಎಂದು

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಮುದ್ದೇಬಿಹಾಳ : ಪರೀಕ್ಷೆ ನಡೆಯುವ ಶಿಕ್ಷಣ ಸಂಸ್ಥೆ, ಪ್ರೌಢಶಾಲೆ ಮುಖ್ಯಗುರುಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿ ಅದೇ ಶಾಲೆಯಲ್ಲಿರುವ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಿದೆ.ಆದರೆ ಇಲ್ಲಿನ ತಾಲ್ಲೂಕು ಶಿಕ್ಷಣಾಧಿಕಾರಿಗಳು ನಿಯೋಜಿಸಿರುವ ಶಾಲೆಯ ವೇಳಾ ಪಟ್ಟಿಯಲ್ಲಿ ಸ್ಥಳೀಯ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯಶಿಕ್ಷಕರಿಗೆ ಮುಖ್ಯ ಅಧೀಕ್ಷಕರ ಜವಾಬ್ದಾರಿಯನ್ನು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ತಾಳಿಕೋಟಿಯ ಎರಡು ಪರೀಕ್ಷಾ ಕೇಂದ್ರಗಳು ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಿಗೆ ಆಯಾ

ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್

ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್

ಹೈದರಾಬಾದ್: ಬೆಟ್ಟಿಂಗ್ ಅಪ್ಲಿಕೇಶನ್ ಪ್ರಚಾರ ಮಾಡಿದ ಆರೋಪದ ಮೇಲೆ ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಕಾಶ್‌ ರಾಜ್, ನಟರಾದ ವಿಜಯ್‌ ದೇವರಕೊಂಡ, ರಾಣಾ ದಗ್ಗುಭಾಟಿ ಸೇರಿದಂತೆ 25ಕ್ಕೂ ಹೆಚ್ಚು ನಟ-ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ 25 ನಟ,ನಟಿಯರ ವಿರುದ್ದ ತೆಲಂಗಾಣದಲ್ಲಿ ಪೊಲೀಸ್ ಕೇಸ್ ಎದುರಿಸುತ್ತಿದ್ದಾರೆ. ಉದ್ಯಮಿ ಫಣೀಂದ್ರ ಶರ್ಮಾ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಸಂಬ್ರಿಟಿಗಳು ಮತ್ತು ಪ್ರಭಾವಿಗಳಲ್ಲಿ ಪ್ರಣೀತಾ, ನಿಧಿ ಅಗರ್‌ವಾಲ್,