ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!

ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!



ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.

ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.

ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.

ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.

ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.

Latest News

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಇಲ್ಲಿನ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ದೇವರು ನುಡಿದರು. ಪಟ್ಟಣದ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ಭಾನುವಾರ ಸಂಜೆ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಸುದ್ದಿ ವಾಹಿನಿ ಬಳಗದ 2026 ನೇ ವರ್ಷದ ದಿನದರ್ಶಿಕೆ ಬಿಡುಗಡೆ ಮಾಡಿ ಮಾತನಾಡಿದರು. ಮಠಗಳು ನಡೆಸುವ ಶೈಕ್ಷಣಿಕ,ಧಾರ್ಮಿಕ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಧ್ಯಮ ಮಾಡಬೇಕಿದೆ.ಮಾಧ್ಯಮ ಕ್ಷೇತ್ರದಲ್ಲಿರುವವರಲ್ಲಿ ಅಸೂಯೆ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,