ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.
ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.
ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.
—
ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.

ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
Latest News
ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ
ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ
ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ
ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ
ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ
ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ
ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ
ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ
ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್ಗಳಿಂದ ರಂಗೇರಿದ ಕುಸ್ತಿ
ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.
ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್ಗಳಿಂದ ರಂಗೇರಿದ ಕುಸ್ತಿ
ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.