ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.
ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.
ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.
—
ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
Latest News
ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ
ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ
ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ
ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ
ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ
S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಓಗಳು,ಮೇಲ್ವಿಚಾರಕರು,ಬಿಎಲ್ಎಗಳ ಹಾಗೂ ಮತದಾರರ
ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು
ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್ಮೇಲ್ ಆರೋಪ
ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ







