ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.
ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.
ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.
—
ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.

ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
Latest News
Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!
Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ
Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!
Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ
ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ಗೆ ಹೊಸಬರ ಆಯ್ಕೆ
ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ನ ನೂತನ
ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?
ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ
Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ
RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ
RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ