ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ ವಿಶೇಷ ಅನುದಾನವನ್ನು ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದರಿಂದ ಸದ್ಯಕ್ಕೆ ಹೊಸ ಕೆಲಸಗಳಿಗೆ ಅನುದಾನ ಸಿಗುವುದು ಕಷ್ಟ.ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುವುದನ್ನು ಮುಂದುವರೆಸಬೇಕು ಎಂದರು.

ಗ್ರಾಪO ಮಾಜಿ ಸದಸ್ಯ ಬಸವರಾಜ ಡಮನಾಲ ಮಾತನಾಡಿ, ಯರಗಲ್ ದಿಂದ ದೇವೂರ ಗ್ರಾಮಕ್ಕೆ ಹೋಗುವ ರಸ್ತೆ ನಿರ್ಮಾಣಕ್ಕೆ ಬೇಡಿಕೆ ಬಹಳ ದಿನಗಳಿಂದ ಇತ್ತು.ಶಾಸಕರ ವಿಶೇಷ ಪ್ರಯತ್ನದಿಂದ ಈ ಕೆಲಸ ಆಗುತ್ತಿರುವುದು ಎಲ್ಲರ ಹರ್ಷಕ್ಕೆ ಕಾರಣವಾಗಿದೆ ಎಂದರು.

ಕೆ.ಆರ್.ಡಿ.ಎಲ್ ಜೆಇ ನಾಗರಾಜ ಬಿರಾದಾರ ಮಾತನಾಡಿ, 4 ಕೋಟಿ ರೂ.ವೆಚ್ಚದಲ್ಲಿ 8 ಕಿ.ಮೀ ರಸ್ತೆ ನಿರ್ಮಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಾಲಾಜಿ ಸಕ್ಕರೆ ನಿರ್ದೇಶಕರಾದ ರಾಹುಲಗೌಡ ಪಾಟೀಲ, ಶ್ರೀನಿವಾರ ಅರಕೇರಿ, ಗ್ರಾಮದ ಮುಖಂಡರಾದ ಎಂ.ಎಸ್.ದೇಶಮುಖ, ವಿ.ಎಸ್.ಕಡಿ,ಕೆ.ಆರ್.ಡಿ.ಎಲ್ ಎಇ ವಿಶಾಲ ಬರ್ಹಾನಪುರ,ಗುತ್ತಿಗೆದಾರ ಮುತ್ತಿನಶೆಟ್ಟಿ ಗೂಳಿ, ಮಾರುತಿ ಗುರವ ಮೊದಲಾದವರು ಇದ್ದರು.

ಇದೇ ಸಮಯದಲ್ಲಿ ಯರಗಲ್ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಗಳ ದುರಸ್ತಿಗೆ ,ಎಸ್.ಸಿ ಕಾಲೋನಿಯಲ್ಲಿ ಸಮುದಾಯ ಭವನಕ್ಕೆ ಅನುದಾನ ಒದಗಿಸುವಂತೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ