Congress is responsible for Mahadayi's setback: MP Basavaraja Bommai

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು.

ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.


11 ವಿಧೇಯಕಗಳನ್ನು ವಾಪಾಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ದ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ತಿರುಮಲದಲ್ಲಿ ಭಕ್ತರಿಗೆ ತಿಲಕ ಧಾರಣೆ ಆರಂಭ

ಇನ್ನು, ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ