ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು.

ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ ಅವರ ಗೆಲುವಿನಲ್ಲಿ ಶಾಂತಗೌಡರ ಪಾತ್ರ ಅತ್ಯಂತ ಹಿರಿದಾಗಿದೆ.ಅವರು ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಶಾಸಕರಾಗಿ ಆಯ್ಕೆಯಾಗಿ ಜನಸೇವೆ ಮಾಡಲಿ ಎಂದು ಹೇಳಿದರು.

ಇನ್ನೋರ್ವ ಮುಖಂಡ ಬಸವರಾಜ ಭಜಂತ್ರಿ ಮಾತನಾಡಿ, ಶಾಂತಗೌಡ ಪಾಟೀಲ ನಡಹಳ್ಳಿಯವರು ಕಾಂಗ್ರೆಸ್ ಪಕ್ಷದ ಸಲುವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ.ಅವರು ಮುಂಬರುವ ದಿನಮಾನಗಳಲ್ಲಿ ಉನ್ನತ ಸ್ಥಾನದಲ್ಲಿ ಪಕ್ಷದ ನಾಯಕರು ಗುರುತಿಸಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಶಾಂತಗೌಡ ಪಾಟೀಲರು ಒಳ್ಳೆಯ ಸಮಾಜಸೇವಕರು,ಹೋರಾಟಗಾರರು.ಮುಂಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ.ಸಕ್ರಿಯ ರಾಜಕಾರಣದಿಂದ ದೂರವಾದರೆ ಅಭಿಮಾನಿಗಳು ಅನಾಥರಾಗುತ್ತಾರೆ.ಅವರ ಸಲುವಾಗಿ ರಾಜಕಾರಣದಲ್ಲಿ ಇರಿ ಎಂದು ಸಲಹೆ ಮಾಡಿದರು.

ಪಂಚಮಸಾಲಿ ಸಮಾಜದ ಯುವ ಮುಖಂಡ ಕಾಮರಾಜ ಬಿರಾದಾರ ಮಾತನಾಡಿ, ಸಮಾಜ ಸೇವೆ,ಹೋರಾಟದ ಬದುಕಿನ ಮೂಲಕ ಬೆಳೆದಿರುವ ಶಾಂತಗೌಡರು ಮುಂಬರುವ ದಿನಗಳಲ್ಲಿ ತಮ್ಮ ಬಳಿ ಕಷ್ಟ ಎಂದು ಬಂದವರಿಗೆ ಸಹಾಯ ಮಾಡುವ ಶಕ್ತಿಯನ್ನು ಇನ್ನಷ್ಟು ಭಗವಂತ ಅವರಿಗೆ ಕರುಣಿಸಲಿ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ತಿಪ್ಪಣ್ಣ ದೊಡಮನಿ, ಶಾಂತಗೌಡ ಪಾಟೀಲ ನಡಹಳ್ಳಿ ಅವರ ಆಪ್ತ ಹುಲಗಪ್ಪ ನಾಯ್ಕಮಕ್ಕಳ,ಮುಖಂಡ ಮಲ್ಲು ಅಪರಾಧಿ, ಅಬ್ದುಲಮಜೀದ ಶಿರೋಳ,ಗ್ರಾಪಂ ಸದಸ್ಯ ಅಭಿನಂದನ ಕಡೇಹಳ್ಳಿ, ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ , ಅನ್ಯಾಯ,ಭ್ರಷ್ಟಾಚಾರ ಕಂಡರೆ ನನಗೆ ಸಹಿಸುವುದಕ್ಕೆ ಆಗುವುದಿಲ್ಲ.ನಾನು ಸಕ್ರಿಯ ರಾಜಕಾರಣದಿಂದ ದೂರವು ಆಗಿಲ್ಲ.ಕುಟುಂಬ ಸದಸ್ಯರಿಗೆ ಸಮಯ ಕೊಡುವುದಕ್ಕಾಗಿ ತುಸು ಅಂತರವಿದ್ದೇನೆ.ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಪ್ರತಿ ಹಳ್ಳಿಗೂ ಭೇಟಿ ನೀಡಿ ಎಲ್ಲರ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಇವತ್ತಿನ ರಾಜಕಾರಣ ತುಂಬಾ ಹದಗೆಟ್ಟಿದೆ.ತತ್ವಜ್ಞಾನಿ ಪ್ಲೇಟೋ ಹೇಳಿದಂತೆ ರಾಜಕಾರಣ ಮಾಡುವವನಿಗೆ ಕುಟುಂಬ ಇರಬಾರದು ಎಂದಿದ್ದಾರೆ.ಕುಟುಂಬ ಇದ್ದರೆ ಅವರಲ್ಲಿ ಸ್ವಾರ್ಥ ಮನೆ ಮಾಡುತ್ತದೆ.ಹೆಂಡತಿ, ಮಗ, ಮಗಳನ್ನು ಎಂಎಲ್‌ಎ ಎಂದು ಬೆಳೆಸಿಕೊಂಡು ಹೋಗುತ್ತಾರೆ.ಆದರೆ ನಿಜವಾಗಿ ದುಡಿದವರಿಗೆ ನ್ಯಾಯ ಸಿಗುವುದಿಲ್ಲ.ಯುವಕರು ಶಾಸಕರು,ಸಂಸದರ ಮಕ್ಕಳೇ ಮರಳಿ ಶಾಸಕರಾಗಬೇಕು ಎಂಬ ಮನಸ್ಥಿತಿಯಿಂದ ಯುವಕರು ಹೊರಬಂದು ಬೇರೆಯವರನ್ನು ಬೆಳೆಸುವುದಕ್ಕೆ ಮುಂದಾಗಬೇಕು.ಹಣ ಮಾಡುವುದಕ್ಕಾಗಿ ರಾಜಕಾರಣಕ್ಕೆ ಬರಬೇಡಿ.ಜನಸೇವೆ ಮಾಡಲು ರಾಜಕಾರಣ ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ರಾಚಯ್ಯ ಹಿರೇಮಠ, ವಾಲ್ಮೀಕಿ ಸಮಾಜದ ಅಧ್ಯಕ್ಷ ಹುಲಗಪ್ಪ ನಾಯ್ಕಮಕ್ಕಳ,ಯಲ್ಲಪ್ಪ ಮ್ಯಾಗೇರಿ, ಗ್ರಾಪಂ ಸದಸ್ಯ ಮಂಜು ಪೂಜಾರಿ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಶಾಂತಗೌಡ ಪಾಟೀಲ ನಡಹಳ್ಳಿ ಅವರ ಅಭಿಮಾನಿಗಳು ಇದ್ದರು.

Latest News

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98 ಅಂಕ ಪಡೆದ ರೋಹನ್ ಸೂಳಿಭಾವಿ ಮುದ್ದೇಬಿಹಾಳ ನಗರಕ್ಕೆ ಪ್ರಥಮ,ಶೇ.97.5 ಅಂಕ ಪಡೆದಿರುವ ಚೆನ್ನಪ್ಪ ಸಜ್ಜನ ದ್ವಿತೀಯ ಹಾಗೂ ಶೇ.97.33 ಅಂಕ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ