ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು.

ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ ಅವರ ಗೆಲುವಿನಲ್ಲಿ ಶಾಂತಗೌಡರ ಪಾತ್ರ ಅತ್ಯಂತ ಹಿರಿದಾಗಿದೆ.ಅವರು ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಶಾಸಕರಾಗಿ ಆಯ್ಕೆಯಾಗಿ ಜನಸೇವೆ ಮಾಡಲಿ ಎಂದು ಹೇಳಿದರು.

ಇನ್ನೋರ್ವ ಮುಖಂಡ ಬಸವರಾಜ ಭಜಂತ್ರಿ ಮಾತನಾಡಿ, ಶಾಂತಗೌಡ ಪಾಟೀಲ ನಡಹಳ್ಳಿಯವರು ಕಾಂಗ್ರೆಸ್ ಪಕ್ಷದ ಸಲುವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ.ಅವರು ಮುಂಬರುವ ದಿನಮಾನಗಳಲ್ಲಿ ಉನ್ನತ ಸ್ಥಾನದಲ್ಲಿ ಪಕ್ಷದ ನಾಯಕರು ಗುರುತಿಸಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಶಾಂತಗೌಡ ಪಾಟೀಲರು ಒಳ್ಳೆಯ ಸಮಾಜಸೇವಕರು,ಹೋರಾಟಗಾರರು.ಮುಂಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ.ಸಕ್ರಿಯ ರಾಜಕಾರಣದಿಂದ ದೂರವಾದರೆ ಅಭಿಮಾನಿಗಳು ಅನಾಥರಾಗುತ್ತಾರೆ.ಅವರ ಸಲುವಾಗಿ ರಾಜಕಾರಣದಲ್ಲಿ ಇರಿ ಎಂದು ಸಲಹೆ ಮಾಡಿದರು.

ಪಂಚಮಸಾಲಿ ಸಮಾಜದ ಯುವ ಮುಖಂಡ ಕಾಮರಾಜ ಬಿರಾದಾರ ಮಾತನಾಡಿ, ಸಮಾಜ ಸೇವೆ,ಹೋರಾಟದ ಬದುಕಿನ ಮೂಲಕ ಬೆಳೆದಿರುವ ಶಾಂತಗೌಡರು ಮುಂಬರುವ ದಿನಗಳಲ್ಲಿ ತಮ್ಮ ಬಳಿ ಕಷ್ಟ ಎಂದು ಬಂದವರಿಗೆ ಸಹಾಯ ಮಾಡುವ ಶಕ್ತಿಯನ್ನು ಇನ್ನಷ್ಟು ಭಗವಂತ ಅವರಿಗೆ ಕರುಣಿಸಲಿ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ತಿಪ್ಪಣ್ಣ ದೊಡಮನಿ, ಶಾಂತಗೌಡ ಪಾಟೀಲ ನಡಹಳ್ಳಿ ಅವರ ಆಪ್ತ ಹುಲಗಪ್ಪ ನಾಯ್ಕಮಕ್ಕಳ,ಮುಖಂಡ ಮಲ್ಲು ಅಪರಾಧಿ, ಅಬ್ದುಲಮಜೀದ ಶಿರೋಳ,ಗ್ರಾಪಂ ಸದಸ್ಯ ಅಭಿನಂದನ ಕಡೇಹಳ್ಳಿ, ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ , ಅನ್ಯಾಯ,ಭ್ರಷ್ಟಾಚಾರ ಕಂಡರೆ ನನಗೆ ಸಹಿಸುವುದಕ್ಕೆ ಆಗುವುದಿಲ್ಲ.ನಾನು ಸಕ್ರಿಯ ರಾಜಕಾರಣದಿಂದ ದೂರವು ಆಗಿಲ್ಲ.ಕುಟುಂಬ ಸದಸ್ಯರಿಗೆ ಸಮಯ ಕೊಡುವುದಕ್ಕಾಗಿ ತುಸು ಅಂತರವಿದ್ದೇನೆ.ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಪ್ರತಿ ಹಳ್ಳಿಗೂ ಭೇಟಿ ನೀಡಿ ಎಲ್ಲರ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಇವತ್ತಿನ ರಾಜಕಾರಣ ತುಂಬಾ ಹದಗೆಟ್ಟಿದೆ.ತತ್ವಜ್ಞಾನಿ ಪ್ಲೇಟೋ ಹೇಳಿದಂತೆ ರಾಜಕಾರಣ ಮಾಡುವವನಿಗೆ ಕುಟುಂಬ ಇರಬಾರದು ಎಂದಿದ್ದಾರೆ.ಕುಟುಂಬ ಇದ್ದರೆ ಅವರಲ್ಲಿ ಸ್ವಾರ್ಥ ಮನೆ ಮಾಡುತ್ತದೆ.ಹೆಂಡತಿ, ಮಗ, ಮಗಳನ್ನು ಎಂಎಲ್‌ಎ ಎಂದು ಬೆಳೆಸಿಕೊಂಡು ಹೋಗುತ್ತಾರೆ.ಆದರೆ ನಿಜವಾಗಿ ದುಡಿದವರಿಗೆ ನ್ಯಾಯ ಸಿಗುವುದಿಲ್ಲ.ಯುವಕರು ಶಾಸಕರು,ಸಂಸದರ ಮಕ್ಕಳೇ ಮರಳಿ ಶಾಸಕರಾಗಬೇಕು ಎಂಬ ಮನಸ್ಥಿತಿಯಿಂದ ಯುವಕರು ಹೊರಬಂದು ಬೇರೆಯವರನ್ನು ಬೆಳೆಸುವುದಕ್ಕೆ ಮುಂದಾಗಬೇಕು.ಹಣ ಮಾಡುವುದಕ್ಕಾಗಿ ರಾಜಕಾರಣಕ್ಕೆ ಬರಬೇಡಿ.ಜನಸೇವೆ ಮಾಡಲು ರಾಜಕಾರಣ ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ರಾಚಯ್ಯ ಹಿರೇಮಠ, ವಾಲ್ಮೀಕಿ ಸಮಾಜದ ಅಧ್ಯಕ್ಷ ಹುಲಗಪ್ಪ ನಾಯ್ಕಮಕ್ಕಳ,ಯಲ್ಲಪ್ಪ ಮ್ಯಾಗೇರಿ, ಗ್ರಾಪಂ ಸದಸ್ಯ ಮಂಜು ಪೂಜಾರಿ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಶಾಂತಗೌಡ ಪಾಟೀಲ ನಡಹಳ್ಳಿ ಅವರ ಅಭಿಮಾನಿಗಳು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ