Congress leaders were confused about the figures in the press conference

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

ಮುದ್ದೇಬಿಹಾಳ : ಮತಕ್ಷೇತ್ರದ ಶಾಂತಿಯುತ ವಾತಾವರಣವನ್ನು ಕದಡುವ ಕಾರ್ಯಕ್ಕೆ ಮುಂದಾಗುವುದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಶೋಭೆ ತರುವುದಿಲ್ಲ ಎಂದು ಎಪಿಎಂಸಿ ಸದಸ್ಯ ವಾಯ್.ಎಚ್.ವಿಜಯಕರ್ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಾಡಗೌಡರು ಕಳೆದ ಮೂವ್ವತ್ತು ವರ್ಷಗಳಲ್ಲಿ ಸಚಿವರಾಗಿದ್ದಾರೆ, ದೆಹಲಿ ಪ್ರತಿನಿಧಿಗಳಾಗಿದ್ದಾರೆ,ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಅವರ ಬಗ್ಗೆ ಮಾಜಿ ಶಾಸಕರು ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಹಿಂದೆ ಹುಡ್ಕೋದಲ್ಲಿ ನಿವೇಶನ ಖರೀದಿಯಾಗದ ಸಮಯದಲ್ಲಿ ಹೆಚ್ಚು ಸೈಟ್ ಕೊಂಡವರಿಗೆ ರಿಯಾಯಿತಿ ನೀಡುವುದಾಗಿ ತಿಳಿಸಿದ್ದರು.ಅದರಂತೆ ನಾಡಗೌಡರು ಹೆಚ್ಚಿಗೆ ಸೈಟ್ ಖರೀದಿಸಿದ್ದಾರೆ. ಅದರಲ್ಲಿ ತಪ್ಪು ಹುಡುಕುವಂತದ್ದೇನಿದೆ ಎಂದ ವಿಜಯಕರ್, ಮಾಜಿ ಶಾಸಕ ನಡಹಳ್ಳಿಯವರು ಪರ್ಸೆಂಟೇಜ್ ಪಡೆದು ನಿರ್ಮಿಸಿದ ಸಿಸಿ ರಸ್ತೆಗಳೆಲ್ಲ ಬಿರುಕು ಬಿಟ್ಟಿವೆ.ಅಭಿವೃದ್ಧಿ ಎಂದರೆ ಕೇವಲ ಸಿಸಿ ರಸ್ತೆ ಅಲ್ಲ.ಹಿಂದಿನ ಸಿಪಿಐ ಯಾರ ಮನೆಯ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಮತಕ್ಷೇತ್ರದಲ್ಲಿ ಒಂದೂವರೆ ವರ್ಷದ ಅವಧಿಯಲ್ಲಿ ಶಾಸಕ ನಾಡಗೌಡರು, ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ., ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ ಒಂದು ಕೋಟಿ,,ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ, ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ, ಮುದ್ದೇಬಿಹಾಳ, ತಾಳಿಕೋಟಿ,ನಾಲತವಾಡದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ, ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂ., ರೂ.ಬಿಡುಗಡೆ ಆಗಿದೆ.

ಈ ಎಲ್ಲ ಯೋಜನೆಗಳು ನಾಡಗೌಡರ ಅವಧಿಯಲ್ಲಿ ಚಾಲ್ತಿಯಲ್ಲಿರುವಂತಹದ್ದಾಗಿವೆ. ಮಾಜಿ ಶಾಸಕ ನಡಹಳ್ಳಿಯವರು ಆರೋಪ ಮಾಡುವ ಮುನ್ನ ಯೋಚಿಸಿ ಮಾತನಾಡುವುದನ್ನು ಕಲಿತುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಕಾಮರಾಜ ಬಿರಾದಾರ ಮಾತನಾಡಿದರು.ಮುಖಂಡರಾದ ಸುರೇಶಗೌಡ ಪಾಟೀಲ್ ಇಂಗಳಗೇರಿ, ಅಬ್ದುಲಗಫೂರ ಮಕಾನದಾರ, ಬಾಪುಗೌಡ ಪೀರಾಪೂರ, ಗುತ್ತಿಗೆದಾರ ಯಲ್ಲಪ್ಪ ಚಲವಾದಿ, ಪ್ರಭುರಾಜ ಕಲ್ಬುರ್ಗಿ, ಸಂಗಣ್ಣ ನಾಲತವಾಡ, ತಿಪ್ಪಣ್ಣ ಗೋನಾಳ, ಶ್ರೀಕಾಂತ ಚಲವಾದಿ, ರಾಜು ರಾಯಗೊಂಡ ಮತ್ತಿತರರು ಇದ್ದರು.

ಅನುದಾನ ಬಿಡುಗಡೆಯ ನಿಖರ ಅಂಕಿ ಸಂಖ್ಯೆ ; ಮುಖಂಡರ ಅಸ್ಪಷ್ಟತೆ

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಅವರು, ಮುದ್ದೇಬಿಹಾಳ ಮತಕ್ಷೇತ್ರಕ್ಕೆ 350 ಕೋಟಿ ರೂ. ಅನುದಾನ ಶಾಸಕ ನಾಡಗೌಡರು ಶಾಸಕರಾದ ಒಂದೂವರೆ ವರ್ಷದ ಅವಧಿಯಲ್ಲಿ ಬಿಡುಗಡೆಯಾಗಿದೆ ಎಂದು ಹೇಳಿದರೆ, ಇನ್ನೋರ್ವ ಮುಖಂಡ ವಾಯ್.ಎಚ್.ವಿಜಯಕರ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ನಾಡಗೌಡರು 250 ಕೋಟಿಗೂ ಅಧಿಕ ಅನುದಾನ ತಂದಿದ್ದಾರೆ ಎಂದು ಹೇಳುವ ಮೂಲಕ ವಿರೋಧ ಪಕ್ಷದವರ ಆರೋಪಕ್ಕೆ ಸ್ಪಷ್ಟವಾದ ಉತ್ತರವನ್ನು ದಾಖಲೆ ಸಮೇತವಾಗಿ ಮಾಧ್ಯಮದವರಿಗೆ ಒದಗಿಸುವುದಕ್ಕೆ ಆಗಲಿಲ್ಲ.

ಇದನ್ನೂ ಓದಿ: ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ