Congress leaders were confused about the figures in the press conference

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

ಮುದ್ದೇಬಿಹಾಳ : ಮತಕ್ಷೇತ್ರದ ಶಾಂತಿಯುತ ವಾತಾವರಣವನ್ನು ಕದಡುವ ಕಾರ್ಯಕ್ಕೆ ಮುಂದಾಗುವುದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಶೋಭೆ ತರುವುದಿಲ್ಲ ಎಂದು ಎಪಿಎಂಸಿ ಸದಸ್ಯ ವಾಯ್.ಎಚ್.ವಿಜಯಕರ್ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಾಡಗೌಡರು ಕಳೆದ ಮೂವ್ವತ್ತು ವರ್ಷಗಳಲ್ಲಿ ಸಚಿವರಾಗಿದ್ದಾರೆ, ದೆಹಲಿ ಪ್ರತಿನಿಧಿಗಳಾಗಿದ್ದಾರೆ,ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಅವರ ಬಗ್ಗೆ ಮಾಜಿ ಶಾಸಕರು ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಹಿಂದೆ ಹುಡ್ಕೋದಲ್ಲಿ ನಿವೇಶನ ಖರೀದಿಯಾಗದ ಸಮಯದಲ್ಲಿ ಹೆಚ್ಚು ಸೈಟ್ ಕೊಂಡವರಿಗೆ ರಿಯಾಯಿತಿ ನೀಡುವುದಾಗಿ ತಿಳಿಸಿದ್ದರು.ಅದರಂತೆ ನಾಡಗೌಡರು ಹೆಚ್ಚಿಗೆ ಸೈಟ್ ಖರೀದಿಸಿದ್ದಾರೆ. ಅದರಲ್ಲಿ ತಪ್ಪು ಹುಡುಕುವಂತದ್ದೇನಿದೆ ಎಂದ ವಿಜಯಕರ್, ಮಾಜಿ ಶಾಸಕ ನಡಹಳ್ಳಿಯವರು ಪರ್ಸೆಂಟೇಜ್ ಪಡೆದು ನಿರ್ಮಿಸಿದ ಸಿಸಿ ರಸ್ತೆಗಳೆಲ್ಲ ಬಿರುಕು ಬಿಟ್ಟಿವೆ.ಅಭಿವೃದ್ಧಿ ಎಂದರೆ ಕೇವಲ ಸಿಸಿ ರಸ್ತೆ ಅಲ್ಲ.ಹಿಂದಿನ ಸಿಪಿಐ ಯಾರ ಮನೆಯ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಮತಕ್ಷೇತ್ರದಲ್ಲಿ ಒಂದೂವರೆ ವರ್ಷದ ಅವಧಿಯಲ್ಲಿ ಶಾಸಕ ನಾಡಗೌಡರು, ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ., ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ ಒಂದು ಕೋಟಿ,,ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ, ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ, ಮುದ್ದೇಬಿಹಾಳ, ತಾಳಿಕೋಟಿ,ನಾಲತವಾಡದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ, ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂ., ರೂ.ಬಿಡುಗಡೆ ಆಗಿದೆ.

ಈ ಎಲ್ಲ ಯೋಜನೆಗಳು ನಾಡಗೌಡರ ಅವಧಿಯಲ್ಲಿ ಚಾಲ್ತಿಯಲ್ಲಿರುವಂತಹದ್ದಾಗಿವೆ. ಮಾಜಿ ಶಾಸಕ ನಡಹಳ್ಳಿಯವರು ಆರೋಪ ಮಾಡುವ ಮುನ್ನ ಯೋಚಿಸಿ ಮಾತನಾಡುವುದನ್ನು ಕಲಿತುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಕಾಮರಾಜ ಬಿರಾದಾರ ಮಾತನಾಡಿದರು.ಮುಖಂಡರಾದ ಸುರೇಶಗೌಡ ಪಾಟೀಲ್ ಇಂಗಳಗೇರಿ, ಅಬ್ದುಲಗಫೂರ ಮಕಾನದಾರ, ಬಾಪುಗೌಡ ಪೀರಾಪೂರ, ಗುತ್ತಿಗೆದಾರ ಯಲ್ಲಪ್ಪ ಚಲವಾದಿ, ಪ್ರಭುರಾಜ ಕಲ್ಬುರ್ಗಿ, ಸಂಗಣ್ಣ ನಾಲತವಾಡ, ತಿಪ್ಪಣ್ಣ ಗೋನಾಳ, ಶ್ರೀಕಾಂತ ಚಲವಾದಿ, ರಾಜು ರಾಯಗೊಂಡ ಮತ್ತಿತರರು ಇದ್ದರು.

ಅನುದಾನ ಬಿಡುಗಡೆಯ ನಿಖರ ಅಂಕಿ ಸಂಖ್ಯೆ ; ಮುಖಂಡರ ಅಸ್ಪಷ್ಟತೆ

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಅವರು, ಮುದ್ದೇಬಿಹಾಳ ಮತಕ್ಷೇತ್ರಕ್ಕೆ 350 ಕೋಟಿ ರೂ. ಅನುದಾನ ಶಾಸಕ ನಾಡಗೌಡರು ಶಾಸಕರಾದ ಒಂದೂವರೆ ವರ್ಷದ ಅವಧಿಯಲ್ಲಿ ಬಿಡುಗಡೆಯಾಗಿದೆ ಎಂದು ಹೇಳಿದರೆ, ಇನ್ನೋರ್ವ ಮುಖಂಡ ವಾಯ್.ಎಚ್.ವಿಜಯಕರ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ನಾಡಗೌಡರು 250 ಕೋಟಿಗೂ ಅಧಿಕ ಅನುದಾನ ತಂದಿದ್ದಾರೆ ಎಂದು ಹೇಳುವ ಮೂಲಕ ವಿರೋಧ ಪಕ್ಷದವರ ಆರೋಪಕ್ಕೆ ಸ್ಪಷ್ಟವಾದ ಉತ್ತರವನ್ನು ದಾಖಲೆ ಸಮೇತವಾಗಿ ಮಾಧ್ಯಮದವರಿಗೆ ಒದಗಿಸುವುದಕ್ಕೆ ಆಗಲಿಲ್ಲ.

ಇದನ್ನೂ ಓದಿ: ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ