ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್ ದುರಸ್ತಿಗೆ ೪೦ ಲಕ್ಷ ರೂ.ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಬಿ.ಸುಶೀಲಾ ಹೇಳಿದರು.

ಪಟ್ಟಣದ ಸಾರಿಗೆ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಗಮದಲ್ಲಿ ಲಭ್ಯ ಅನುದಾನದಲ್ಲಿ ಘಟಕದ ಮೂಲಭೂತ ಸೌರ‍್ಯಗಳನ್ನು ಒದಗಿಸಲು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಅಷ್ಟೇ ಅಲ್ಲದೇ ಹೊಸ ಬಸ್‌ಗಳ ಬೇಡಿಕೆ ಇರುವ ಘಟಕಗಳಿಗೆ ಹೊಸದಾಗಿ ಬಸ್ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅನುದಾನದ ಲಭ್ಯತೆ ನೋಡಿಕೊಂಡು ಹೊಸ ಬಸ್‌ಗಳನ್ನು ನೀಡುತ್ತಾರೆ.ಈಚೇಗೆ ವಿಜಯಪುರ ಜಿಲ್ಲೆಯ ನಗರ ಸಾರಿಗೆಗೆ ೨೭ ಬಸ್‌ಗಳನ್ನು ನೀಡಲಾಗಿದೆ.ಮುಂಬರುವ ದಿನಗಳಲ್ಲಿ ಮುದ್ದೇಬಿಹಾಳ ಬಸ್ ನಿಲ್ದಾಣಕ್ಕೂ ಹೊಸ ಬಸ್‌ಗಳನ್ನು ನೀಡಲಾಗುತ್ತದೆ ಎಂದರು.
ಸೋಲಾಪೂರ,ಪುಣೆ,ವಾಸ್ಕೋ ಮಾರ್ಗದಲ್ಲಿ ರಾತ್ರಿ ಸಂಚರಿಸುತ್ತಿದ್ದ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ.ನಿಲ್ದಾಣದ ಡಿಪೋ ನಿರ್ಮಾಣ,ಶುಚಿತ್ವದ ಕುರಿತು ಎಂಡಿ ಅವರು ಘಟಕದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಗ್ಯಾರAಟಿ ಸಮಿತಿ ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಸದಸ್ಯರಾದ ಸಂಗಣ್ಣ ಮೇಲಿನಮನಿ, ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು.ನಗರ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು.ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ಕೆಕೆಆರ್‌ಟಿಸಿ ಎಇಇ ಮಲ್ಲಿಕಾರ್ಜುನ ಬಿರಾದಾರ, ಪ್ರಭಾರಿ ಮುಖ್ಯ ಅಭಿಯಂತರ ಚೆನ್ನನಬೋರಯ್ಯ ,ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹಿರೇಕುರುಬರ,ಘಟಕ ವ್ಯವಸ್ಥಾಪಕ ಅಶೋಕ ಭೋವಿ ಮೊದಲಾದವರು ಇದ್ದರು. ಅಧಿಕಾರಿಗಳಿಗೆ ತರಾಟೆ : ಸಾರಿಗೆ ಘಟಕದ ವೀಕ್ಷಣೆಗೆ ತೆರಳುತ್ತಿದ್ದ ವೇಳೆ ಮಹಿಳೆಯರ ವಿಶ್ರಾಂತಿ ಕೊಠಡಿಗೆ ತೆರಳಿದಾಗ ಶಿಶುಗಳಿಗೆ ಹಾಲುಣಿಸುವ ಕೊಠಡಿಯಲ್ಲಿ ಒಂದು ಖುರ್ಚಿಯೂ ಇಲ್ಲದ್ದನ್ನು ಕಂಡು ಸಾರಿಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಎಂ.ಡಿ ಅವರು, ಸೂಕ್ತ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸುವಂತೆ ತಿಳಿಸಿದರು.ಸ್ವಚ್ಛತಾ ಏಜೆನ್ಸಿದಾರರಿಗೆ ನೋಟಿಸ್ ಜಾರಿ: ಬಸ್ ನಿಲ್ದಾಣದಲ್ಲಿ ದಿನಗೂಲಿ ಮೇಲೆ ಕೆಲಸ ಮಾಡುವವರು ತಮಗೆ ೨೫೦ ರೂ.ದಿನಗೂಲಿ ಪಾವತಿಸಲಾಗುತ್ತಿದೆ ಎಂದು ಎಂ.ಡಿ ಅವರ ಎದುರಿಗೆ ಅಳಲು ತೋಡಿಕೊಂಡಾಗ ಕನಿಷ್ಠ ಕೂಲಿ ಕಾಯ್ದೆ ಅನ್ವಯ ವೇತನ ಪಾವತಿಸದೇ ನಿರ್ಲಕ್ಷö್ಯ ವಹಿಸಿದ ಆರೋಪದ ಮೇಲೆ ಗುತ್ತಿಗೆ ಏಜೆನ್ಸಿಗೆ ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಸದಸ್ಯ,ಸಾರಿಗೆ ಘಟಕದ ಅಧಿಕಾರಿ ಮಧ್ಯೆ ವಾಗ್ವಾದ:
ಸಾರಿಗೆ ಘಟಕದ ಸಮಸ್ಯೆಗಳ ಕುರಿತು ಗ್ಯಾರಂಟಿ ಸಮಿತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಕೆಕೆಆರ್‌ಟಿಸಿ ಎಂ.ಡಿ ಬಿ.ಸುಶೀಲಾ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗುತ್ತಿದ್ದ ವೇಳೆ ಸಾರಿಗೆ ಘಟಕದ ವ್ಯವಸ್ಥಾಪಕ ಅಶೋಕ ಭೋವಿ ಚಪ್ಪರಬಂದ ಅವರನ್ನು ತಡೆಯಲು ಮುಂದಾಗಿದ್ದನ್ನು ಆಕ್ಷೇಪಿಸಿದ ಚಪ್ಪರಬಂದ ನಾನು ಸಮಸ್ಯೆ ಹೇಳಬೇಡಿ ಎಂದರೆ ಮನೆಗೆ ಹೋಗುತ್ತೇನೆ ಎಂದು ಘಟಕ ವ್ಯವಸ್ಥಾಪಕರೊಂದಿಗೆ ವಾಗ್ವಾದ ನಡೆಸಿದರು.ಬಳಿಕ ಇರ್ವರನ್ನೂ ಎಂ.ಡಿ ಅವರೇ ಸಮಾಧಾನ ಮಾಡಿದರು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ