ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್ ದುರಸ್ತಿಗೆ ೪೦ ಲಕ್ಷ ರೂ.ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಬಿ.ಸುಶೀಲಾ ಹೇಳಿದರು.

ಪಟ್ಟಣದ ಸಾರಿಗೆ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಗಮದಲ್ಲಿ ಲಭ್ಯ ಅನುದಾನದಲ್ಲಿ ಘಟಕದ ಮೂಲಭೂತ ಸೌರ‍್ಯಗಳನ್ನು ಒದಗಿಸಲು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಅಷ್ಟೇ ಅಲ್ಲದೇ ಹೊಸ ಬಸ್‌ಗಳ ಬೇಡಿಕೆ ಇರುವ ಘಟಕಗಳಿಗೆ ಹೊಸದಾಗಿ ಬಸ್ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅನುದಾನದ ಲಭ್ಯತೆ ನೋಡಿಕೊಂಡು ಹೊಸ ಬಸ್‌ಗಳನ್ನು ನೀಡುತ್ತಾರೆ.ಈಚೇಗೆ ವಿಜಯಪುರ ಜಿಲ್ಲೆಯ ನಗರ ಸಾರಿಗೆಗೆ ೨೭ ಬಸ್‌ಗಳನ್ನು ನೀಡಲಾಗಿದೆ.ಮುಂಬರುವ ದಿನಗಳಲ್ಲಿ ಮುದ್ದೇಬಿಹಾಳ ಬಸ್ ನಿಲ್ದಾಣಕ್ಕೂ ಹೊಸ ಬಸ್‌ಗಳನ್ನು ನೀಡಲಾಗುತ್ತದೆ ಎಂದರು.
ಸೋಲಾಪೂರ,ಪುಣೆ,ವಾಸ್ಕೋ ಮಾರ್ಗದಲ್ಲಿ ರಾತ್ರಿ ಸಂಚರಿಸುತ್ತಿದ್ದ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ.ನಿಲ್ದಾಣದ ಡಿಪೋ ನಿರ್ಮಾಣ,ಶುಚಿತ್ವದ ಕುರಿತು ಎಂಡಿ ಅವರು ಘಟಕದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಗ್ಯಾರAಟಿ ಸಮಿತಿ ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಸದಸ್ಯರಾದ ಸಂಗಣ್ಣ ಮೇಲಿನಮನಿ, ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು.ನಗರ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು.ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ಕೆಕೆಆರ್‌ಟಿಸಿ ಎಇಇ ಮಲ್ಲಿಕಾರ್ಜುನ ಬಿರಾದಾರ, ಪ್ರಭಾರಿ ಮುಖ್ಯ ಅಭಿಯಂತರ ಚೆನ್ನನಬೋರಯ್ಯ ,ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹಿರೇಕುರುಬರ,ಘಟಕ ವ್ಯವಸ್ಥಾಪಕ ಅಶೋಕ ಭೋವಿ ಮೊದಲಾದವರು ಇದ್ದರು. ಅಧಿಕಾರಿಗಳಿಗೆ ತರಾಟೆ : ಸಾರಿಗೆ ಘಟಕದ ವೀಕ್ಷಣೆಗೆ ತೆರಳುತ್ತಿದ್ದ ವೇಳೆ ಮಹಿಳೆಯರ ವಿಶ್ರಾಂತಿ ಕೊಠಡಿಗೆ ತೆರಳಿದಾಗ ಶಿಶುಗಳಿಗೆ ಹಾಲುಣಿಸುವ ಕೊಠಡಿಯಲ್ಲಿ ಒಂದು ಖುರ್ಚಿಯೂ ಇಲ್ಲದ್ದನ್ನು ಕಂಡು ಸಾರಿಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಎಂ.ಡಿ ಅವರು, ಸೂಕ್ತ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸುವಂತೆ ತಿಳಿಸಿದರು.ಸ್ವಚ್ಛತಾ ಏಜೆನ್ಸಿದಾರರಿಗೆ ನೋಟಿಸ್ ಜಾರಿ: ಬಸ್ ನಿಲ್ದಾಣದಲ್ಲಿ ದಿನಗೂಲಿ ಮೇಲೆ ಕೆಲಸ ಮಾಡುವವರು ತಮಗೆ ೨೫೦ ರೂ.ದಿನಗೂಲಿ ಪಾವತಿಸಲಾಗುತ್ತಿದೆ ಎಂದು ಎಂ.ಡಿ ಅವರ ಎದುರಿಗೆ ಅಳಲು ತೋಡಿಕೊಂಡಾಗ ಕನಿಷ್ಠ ಕೂಲಿ ಕಾಯ್ದೆ ಅನ್ವಯ ವೇತನ ಪಾವತಿಸದೇ ನಿರ್ಲಕ್ಷö್ಯ ವಹಿಸಿದ ಆರೋಪದ ಮೇಲೆ ಗುತ್ತಿಗೆ ಏಜೆನ್ಸಿಗೆ ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಸದಸ್ಯ,ಸಾರಿಗೆ ಘಟಕದ ಅಧಿಕಾರಿ ಮಧ್ಯೆ ವಾಗ್ವಾದ:
ಸಾರಿಗೆ ಘಟಕದ ಸಮಸ್ಯೆಗಳ ಕುರಿತು ಗ್ಯಾರಂಟಿ ಸಮಿತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಕೆಕೆಆರ್‌ಟಿಸಿ ಎಂ.ಡಿ ಬಿ.ಸುಶೀಲಾ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗುತ್ತಿದ್ದ ವೇಳೆ ಸಾರಿಗೆ ಘಟಕದ ವ್ಯವಸ್ಥಾಪಕ ಅಶೋಕ ಭೋವಿ ಚಪ್ಪರಬಂದ ಅವರನ್ನು ತಡೆಯಲು ಮುಂದಾಗಿದ್ದನ್ನು ಆಕ್ಷೇಪಿಸಿದ ಚಪ್ಪರಬಂದ ನಾನು ಸಮಸ್ಯೆ ಹೇಳಬೇಡಿ ಎಂದರೆ ಮನೆಗೆ ಹೋಗುತ್ತೇನೆ ಎಂದು ಘಟಕ ವ್ಯವಸ್ಥಾಪಕರೊಂದಿಗೆ ವಾಗ್ವಾದ ನಡೆಸಿದರು.ಬಳಿಕ ಇರ್ವರನ್ನೂ ಎಂ.ಡಿ ಅವರೇ ಸಮಾಧಾನ ಮಾಡಿದರು.

Latest News

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.