ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್ ದುರಸ್ತಿಗೆ ೪೦ ಲಕ್ಷ ರೂ.ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಬಿ.ಸುಶೀಲಾ ಹೇಳಿದರು.

ಪಟ್ಟಣದ ಸಾರಿಗೆ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಗಮದಲ್ಲಿ ಲಭ್ಯ ಅನುದಾನದಲ್ಲಿ ಘಟಕದ ಮೂಲಭೂತ ಸೌರ‍್ಯಗಳನ್ನು ಒದಗಿಸಲು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಅಷ್ಟೇ ಅಲ್ಲದೇ ಹೊಸ ಬಸ್‌ಗಳ ಬೇಡಿಕೆ ಇರುವ ಘಟಕಗಳಿಗೆ ಹೊಸದಾಗಿ ಬಸ್ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅನುದಾನದ ಲಭ್ಯತೆ ನೋಡಿಕೊಂಡು ಹೊಸ ಬಸ್‌ಗಳನ್ನು ನೀಡುತ್ತಾರೆ.ಈಚೇಗೆ ವಿಜಯಪುರ ಜಿಲ್ಲೆಯ ನಗರ ಸಾರಿಗೆಗೆ ೨೭ ಬಸ್‌ಗಳನ್ನು ನೀಡಲಾಗಿದೆ.ಮುಂಬರುವ ದಿನಗಳಲ್ಲಿ ಮುದ್ದೇಬಿಹಾಳ ಬಸ್ ನಿಲ್ದಾಣಕ್ಕೂ ಹೊಸ ಬಸ್‌ಗಳನ್ನು ನೀಡಲಾಗುತ್ತದೆ ಎಂದರು.
ಸೋಲಾಪೂರ,ಪುಣೆ,ವಾಸ್ಕೋ ಮಾರ್ಗದಲ್ಲಿ ರಾತ್ರಿ ಸಂಚರಿಸುತ್ತಿದ್ದ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ.ನಿಲ್ದಾಣದ ಡಿಪೋ ನಿರ್ಮಾಣ,ಶುಚಿತ್ವದ ಕುರಿತು ಎಂಡಿ ಅವರು ಘಟಕದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಗ್ಯಾರAಟಿ ಸಮಿತಿ ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಸದಸ್ಯರಾದ ಸಂಗಣ್ಣ ಮೇಲಿನಮನಿ, ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು.ನಗರ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು.ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ಕೆಕೆಆರ್‌ಟಿಸಿ ಎಇಇ ಮಲ್ಲಿಕಾರ್ಜುನ ಬಿರಾದಾರ, ಪ್ರಭಾರಿ ಮುಖ್ಯ ಅಭಿಯಂತರ ಚೆನ್ನನಬೋರಯ್ಯ ,ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹಿರೇಕುರುಬರ,ಘಟಕ ವ್ಯವಸ್ಥಾಪಕ ಅಶೋಕ ಭೋವಿ ಮೊದಲಾದವರು ಇದ್ದರು. ಅಧಿಕಾರಿಗಳಿಗೆ ತರಾಟೆ : ಸಾರಿಗೆ ಘಟಕದ ವೀಕ್ಷಣೆಗೆ ತೆರಳುತ್ತಿದ್ದ ವೇಳೆ ಮಹಿಳೆಯರ ವಿಶ್ರಾಂತಿ ಕೊಠಡಿಗೆ ತೆರಳಿದಾಗ ಶಿಶುಗಳಿಗೆ ಹಾಲುಣಿಸುವ ಕೊಠಡಿಯಲ್ಲಿ ಒಂದು ಖುರ್ಚಿಯೂ ಇಲ್ಲದ್ದನ್ನು ಕಂಡು ಸಾರಿಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಎಂ.ಡಿ ಅವರು, ಸೂಕ್ತ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸುವಂತೆ ತಿಳಿಸಿದರು.ಸ್ವಚ್ಛತಾ ಏಜೆನ್ಸಿದಾರರಿಗೆ ನೋಟಿಸ್ ಜಾರಿ: ಬಸ್ ನಿಲ್ದಾಣದಲ್ಲಿ ದಿನಗೂಲಿ ಮೇಲೆ ಕೆಲಸ ಮಾಡುವವರು ತಮಗೆ ೨೫೦ ರೂ.ದಿನಗೂಲಿ ಪಾವತಿಸಲಾಗುತ್ತಿದೆ ಎಂದು ಎಂ.ಡಿ ಅವರ ಎದುರಿಗೆ ಅಳಲು ತೋಡಿಕೊಂಡಾಗ ಕನಿಷ್ಠ ಕೂಲಿ ಕಾಯ್ದೆ ಅನ್ವಯ ವೇತನ ಪಾವತಿಸದೇ ನಿರ್ಲಕ್ಷö್ಯ ವಹಿಸಿದ ಆರೋಪದ ಮೇಲೆ ಗುತ್ತಿಗೆ ಏಜೆನ್ಸಿಗೆ ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಸದಸ್ಯ,ಸಾರಿಗೆ ಘಟಕದ ಅಧಿಕಾರಿ ಮಧ್ಯೆ ವಾಗ್ವಾದ:
ಸಾರಿಗೆ ಘಟಕದ ಸಮಸ್ಯೆಗಳ ಕುರಿತು ಗ್ಯಾರಂಟಿ ಸಮಿತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಕೆಕೆಆರ್‌ಟಿಸಿ ಎಂ.ಡಿ ಬಿ.ಸುಶೀಲಾ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗುತ್ತಿದ್ದ ವೇಳೆ ಸಾರಿಗೆ ಘಟಕದ ವ್ಯವಸ್ಥಾಪಕ ಅಶೋಕ ಭೋವಿ ಚಪ್ಪರಬಂದ ಅವರನ್ನು ತಡೆಯಲು ಮುಂದಾಗಿದ್ದನ್ನು ಆಕ್ಷೇಪಿಸಿದ ಚಪ್ಪರಬಂದ ನಾನು ಸಮಸ್ಯೆ ಹೇಳಬೇಡಿ ಎಂದರೆ ಮನೆಗೆ ಹೋಗುತ್ತೇನೆ ಎಂದು ಘಟಕ ವ್ಯವಸ್ಥಾಪಕರೊಂದಿಗೆ ವಾಗ್ವಾದ ನಡೆಸಿದರು.ಬಳಿಕ ಇರ್ವರನ್ನೂ ಎಂ.ಡಿ ಅವರೇ ಸಮಾಧಾನ ಮಾಡಿದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ