ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್ ದುರಸ್ತಿಗೆ ೪೦ ಲಕ್ಷ ರೂ.ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಬಿ.ಸುಶೀಲಾ ಹೇಳಿದರು.

ಪಟ್ಟಣದ ಸಾರಿಗೆ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಗಮದಲ್ಲಿ ಲಭ್ಯ ಅನುದಾನದಲ್ಲಿ ಘಟಕದ ಮೂಲಭೂತ ಸೌರ‍್ಯಗಳನ್ನು ಒದಗಿಸಲು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಅಷ್ಟೇ ಅಲ್ಲದೇ ಹೊಸ ಬಸ್‌ಗಳ ಬೇಡಿಕೆ ಇರುವ ಘಟಕಗಳಿಗೆ ಹೊಸದಾಗಿ ಬಸ್ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅನುದಾನದ ಲಭ್ಯತೆ ನೋಡಿಕೊಂಡು ಹೊಸ ಬಸ್‌ಗಳನ್ನು ನೀಡುತ್ತಾರೆ.ಈಚೇಗೆ ವಿಜಯಪುರ ಜಿಲ್ಲೆಯ ನಗರ ಸಾರಿಗೆಗೆ ೨೭ ಬಸ್‌ಗಳನ್ನು ನೀಡಲಾಗಿದೆ.ಮುಂಬರುವ ದಿನಗಳಲ್ಲಿ ಮುದ್ದೇಬಿಹಾಳ ಬಸ್ ನಿಲ್ದಾಣಕ್ಕೂ ಹೊಸ ಬಸ್‌ಗಳನ್ನು ನೀಡಲಾಗುತ್ತದೆ ಎಂದರು.
ಸೋಲಾಪೂರ,ಪುಣೆ,ವಾಸ್ಕೋ ಮಾರ್ಗದಲ್ಲಿ ರಾತ್ರಿ ಸಂಚರಿಸುತ್ತಿದ್ದ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ.ನಿಲ್ದಾಣದ ಡಿಪೋ ನಿರ್ಮಾಣ,ಶುಚಿತ್ವದ ಕುರಿತು ಎಂಡಿ ಅವರು ಘಟಕದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಗ್ಯಾರAಟಿ ಸಮಿತಿ ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಸದಸ್ಯರಾದ ಸಂಗಣ್ಣ ಮೇಲಿನಮನಿ, ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು.ನಗರ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು.ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ಕೆಕೆಆರ್‌ಟಿಸಿ ಎಇಇ ಮಲ್ಲಿಕಾರ್ಜುನ ಬಿರಾದಾರ, ಪ್ರಭಾರಿ ಮುಖ್ಯ ಅಭಿಯಂತರ ಚೆನ್ನನಬೋರಯ್ಯ ,ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹಿರೇಕುರುಬರ,ಘಟಕ ವ್ಯವಸ್ಥಾಪಕ ಅಶೋಕ ಭೋವಿ ಮೊದಲಾದವರು ಇದ್ದರು. ಅಧಿಕಾರಿಗಳಿಗೆ ತರಾಟೆ : ಸಾರಿಗೆ ಘಟಕದ ವೀಕ್ಷಣೆಗೆ ತೆರಳುತ್ತಿದ್ದ ವೇಳೆ ಮಹಿಳೆಯರ ವಿಶ್ರಾಂತಿ ಕೊಠಡಿಗೆ ತೆರಳಿದಾಗ ಶಿಶುಗಳಿಗೆ ಹಾಲುಣಿಸುವ ಕೊಠಡಿಯಲ್ಲಿ ಒಂದು ಖುರ್ಚಿಯೂ ಇಲ್ಲದ್ದನ್ನು ಕಂಡು ಸಾರಿಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಎಂ.ಡಿ ಅವರು, ಸೂಕ್ತ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸುವಂತೆ ತಿಳಿಸಿದರು.ಸ್ವಚ್ಛತಾ ಏಜೆನ್ಸಿದಾರರಿಗೆ ನೋಟಿಸ್ ಜಾರಿ: ಬಸ್ ನಿಲ್ದಾಣದಲ್ಲಿ ದಿನಗೂಲಿ ಮೇಲೆ ಕೆಲಸ ಮಾಡುವವರು ತಮಗೆ ೨೫೦ ರೂ.ದಿನಗೂಲಿ ಪಾವತಿಸಲಾಗುತ್ತಿದೆ ಎಂದು ಎಂ.ಡಿ ಅವರ ಎದುರಿಗೆ ಅಳಲು ತೋಡಿಕೊಂಡಾಗ ಕನಿಷ್ಠ ಕೂಲಿ ಕಾಯ್ದೆ ಅನ್ವಯ ವೇತನ ಪಾವತಿಸದೇ ನಿರ್ಲಕ್ಷö್ಯ ವಹಿಸಿದ ಆರೋಪದ ಮೇಲೆ ಗುತ್ತಿಗೆ ಏಜೆನ್ಸಿಗೆ ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಸದಸ್ಯ,ಸಾರಿಗೆ ಘಟಕದ ಅಧಿಕಾರಿ ಮಧ್ಯೆ ವಾಗ್ವಾದ:
ಸಾರಿಗೆ ಘಟಕದ ಸಮಸ್ಯೆಗಳ ಕುರಿತು ಗ್ಯಾರಂಟಿ ಸಮಿತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಕೆಕೆಆರ್‌ಟಿಸಿ ಎಂ.ಡಿ ಬಿ.ಸುಶೀಲಾ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗುತ್ತಿದ್ದ ವೇಳೆ ಸಾರಿಗೆ ಘಟಕದ ವ್ಯವಸ್ಥಾಪಕ ಅಶೋಕ ಭೋವಿ ಚಪ್ಪರಬಂದ ಅವರನ್ನು ತಡೆಯಲು ಮುಂದಾಗಿದ್ದನ್ನು ಆಕ್ಷೇಪಿಸಿದ ಚಪ್ಪರಬಂದ ನಾನು ಸಮಸ್ಯೆ ಹೇಳಬೇಡಿ ಎಂದರೆ ಮನೆಗೆ ಹೋಗುತ್ತೇನೆ ಎಂದು ಘಟಕ ವ್ಯವಸ್ಥಾಪಕರೊಂದಿಗೆ ವಾಗ್ವಾದ ನಡೆಸಿದರು.ಬಳಿಕ ಇರ್ವರನ್ನೂ ಎಂ.ಡಿ ಅವರೇ ಸಮಾಧಾನ ಮಾಡಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ