Consumer Accident Insurance Payment by bank itself

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಮುದ್ದೇಬಿಹಾಳ : ಗ್ರಾಹಕರಿಗೆ ಬಡ್ಡಿ ಹೊರೆ ಆಗಬಾರದು ಎಂಬ ಕಾರಣಕ್ಕೆ ಲಾಭಾಂಶದ ಪ್ರಮಾಣ ಹೆಚ್ಚಿಸಿಲ್ಲ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಏಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು 395.65 ಲಕ್ಷ ರೂ.ಆದಾಯ ಗಳಿಸಿದ್ದು ಅದರಲ್ಲಿ ನಿವ್ವಳ 96.87 ಲಕ್ಷ ರೂ.ಲಾಭ ಗಳಿಸಿದೆ.ಪ್ರಸಕ್ತ ಸಾಲಿನಲ್ಲಿ ಎಲ್ಲ ಸದಸ್ಯರಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸುತ್ತಿದ್ದು ಅದಕ್ಕೆ ತಗಲುವ ವಿಮೆ ಕಂತಿನ ಹಣವನ್ನು ಪ್ರತಿ ವರ್ಷ ಬ್ಯಾಂಕಿನಿಂದಲೇ ಭರಣಾ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.

9268 ಸದಸ್ಯರಿಗೆ ವಿಮೆ ಪಾವತಿಸಲಾಗುತ್ತಿದೆ. ಅಪಘಾತವಾಗಿ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ,ಮೃತಪಟ್ಟರೆ ಎರಡು ಲಕ್ಷ ರೂ.ಮೃತರ ಅವಲಂಬಿತರಿಗೆ ವಿಮಾ ಕಂಪನಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಹಕರಾದ ಬಸನಗೌಡ ಪಾಟೀಲ್, ಬಾಬು ಬಿರಾದಾರ, ಶರಣಯ್ಯ ಹಿರೇಮಠ, ಬಿ.ಎಸ್.ಮೇಟಿ ಮಾತನಾಡಿ, ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಗ್ರಾಹಕರಿಗೆ ಲಾಭಾಂಶದ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸಿಲ್ಲ. ಡಿವ್ಹಿಡೆಂಡ್ ಹೆಚ್ಚಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಅಧ್ಯಕ್ಷ ಓಸ್ವಾಲ್,ನಮ್ಮ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳುವ ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿ ಅದರಿಂದ ಬಂದ ಆದಾಯವನ್ನು ಲಾಭಾಂಶದ ರೂಪದಲ್ಲಿ ಹೆಚ್ಚಿಸಿಕೊಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಹಿರಿಯ ನಿರ್ದೇಶಕರಾದ ಎಸ್.ಎಸ್.ಮಾಲಗತ್ತಿ, ವೆಂಕನಗೌಡ ಪಾಟೀಲ್ ಮಾತನಾಡಿದರು.

ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರಾಜಶೇಖರ ಕರಡ್ಡಿ, ಪ್ರಭುದೇವ ಕಲ್ಬುರ್ಗಿ, ರುದ್ರಪ್ಪ ಕಡಿ, ಜಿ.ಬಿ.ಪಾಟೀಲ್, ಶ್ರೀದೇವಿ ಮದರಿ, ವೃತ್ತಿಪರ ನಿರ್ದೇಶಕ ಸುನೀಲ ಇಲ್ಲೂರ ಇದ್ದರು.

ಇದನ್ನೂ ಓದಿ: ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ವೃತ್ತಿಪರ ನಿರ್ದೇಶಕ ನಾಗಭೂಷಣ ನಾವದಗಿ ಸ್ವಾಗತಿಸಿದರು. ಎಂ.ಕೆ.ರಾಯಗೊಂಡ ಸುಮಾ ನಾಡಗೌಡ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು