Consumer Accident Insurance Payment by bank itself

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಮುದ್ದೇಬಿಹಾಳ : ಗ್ರಾಹಕರಿಗೆ ಬಡ್ಡಿ ಹೊರೆ ಆಗಬಾರದು ಎಂಬ ಕಾರಣಕ್ಕೆ ಲಾಭಾಂಶದ ಪ್ರಮಾಣ ಹೆಚ್ಚಿಸಿಲ್ಲ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಏಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು 395.65 ಲಕ್ಷ ರೂ.ಆದಾಯ ಗಳಿಸಿದ್ದು ಅದರಲ್ಲಿ ನಿವ್ವಳ 96.87 ಲಕ್ಷ ರೂ.ಲಾಭ ಗಳಿಸಿದೆ.ಪ್ರಸಕ್ತ ಸಾಲಿನಲ್ಲಿ ಎಲ್ಲ ಸದಸ್ಯರಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸುತ್ತಿದ್ದು ಅದಕ್ಕೆ ತಗಲುವ ವಿಮೆ ಕಂತಿನ ಹಣವನ್ನು ಪ್ರತಿ ವರ್ಷ ಬ್ಯಾಂಕಿನಿಂದಲೇ ಭರಣಾ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.

9268 ಸದಸ್ಯರಿಗೆ ವಿಮೆ ಪಾವತಿಸಲಾಗುತ್ತಿದೆ. ಅಪಘಾತವಾಗಿ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ,ಮೃತಪಟ್ಟರೆ ಎರಡು ಲಕ್ಷ ರೂ.ಮೃತರ ಅವಲಂಬಿತರಿಗೆ ವಿಮಾ ಕಂಪನಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಹಕರಾದ ಬಸನಗೌಡ ಪಾಟೀಲ್, ಬಾಬು ಬಿರಾದಾರ, ಶರಣಯ್ಯ ಹಿರೇಮಠ, ಬಿ.ಎಸ್.ಮೇಟಿ ಮಾತನಾಡಿ, ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಗ್ರಾಹಕರಿಗೆ ಲಾಭಾಂಶದ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸಿಲ್ಲ. ಡಿವ್ಹಿಡೆಂಡ್ ಹೆಚ್ಚಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಅಧ್ಯಕ್ಷ ಓಸ್ವಾಲ್,ನಮ್ಮ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳುವ ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿ ಅದರಿಂದ ಬಂದ ಆದಾಯವನ್ನು ಲಾಭಾಂಶದ ರೂಪದಲ್ಲಿ ಹೆಚ್ಚಿಸಿಕೊಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಹಿರಿಯ ನಿರ್ದೇಶಕರಾದ ಎಸ್.ಎಸ್.ಮಾಲಗತ್ತಿ, ವೆಂಕನಗೌಡ ಪಾಟೀಲ್ ಮಾತನಾಡಿದರು.

ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರಾಜಶೇಖರ ಕರಡ್ಡಿ, ಪ್ರಭುದೇವ ಕಲ್ಬುರ್ಗಿ, ರುದ್ರಪ್ಪ ಕಡಿ, ಜಿ.ಬಿ.ಪಾಟೀಲ್, ಶ್ರೀದೇವಿ ಮದರಿ, ವೃತ್ತಿಪರ ನಿರ್ದೇಶಕ ಸುನೀಲ ಇಲ್ಲೂರ ಇದ್ದರು.

ಇದನ್ನೂ ಓದಿ: ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ವೃತ್ತಿಪರ ನಿರ್ದೇಶಕ ನಾಗಭೂಷಣ ನಾವದಗಿ ಸ್ವಾಗತಿಸಿದರು. ಎಂ.ಕೆ.ರಾಯಗೊಂಡ ಸುಮಾ ನಾಡಗೌಡ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ