Consumer Accident Insurance Payment by bank itself

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಮುದ್ದೇಬಿಹಾಳ : ಗ್ರಾಹಕರಿಗೆ ಬಡ್ಡಿ ಹೊರೆ ಆಗಬಾರದು ಎಂಬ ಕಾರಣಕ್ಕೆ ಲಾಭಾಂಶದ ಪ್ರಮಾಣ ಹೆಚ್ಚಿಸಿಲ್ಲ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಏಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು 395.65 ಲಕ್ಷ ರೂ.ಆದಾಯ ಗಳಿಸಿದ್ದು ಅದರಲ್ಲಿ ನಿವ್ವಳ 96.87 ಲಕ್ಷ ರೂ.ಲಾಭ ಗಳಿಸಿದೆ.ಪ್ರಸಕ್ತ ಸಾಲಿನಲ್ಲಿ ಎಲ್ಲ ಸದಸ್ಯರಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸುತ್ತಿದ್ದು ಅದಕ್ಕೆ ತಗಲುವ ವಿಮೆ ಕಂತಿನ ಹಣವನ್ನು ಪ್ರತಿ ವರ್ಷ ಬ್ಯಾಂಕಿನಿಂದಲೇ ಭರಣಾ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.

9268 ಸದಸ್ಯರಿಗೆ ವಿಮೆ ಪಾವತಿಸಲಾಗುತ್ತಿದೆ. ಅಪಘಾತವಾಗಿ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ,ಮೃತಪಟ್ಟರೆ ಎರಡು ಲಕ್ಷ ರೂ.ಮೃತರ ಅವಲಂಬಿತರಿಗೆ ವಿಮಾ ಕಂಪನಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಹಕರಾದ ಬಸನಗೌಡ ಪಾಟೀಲ್, ಬಾಬು ಬಿರಾದಾರ, ಶರಣಯ್ಯ ಹಿರೇಮಠ, ಬಿ.ಎಸ್.ಮೇಟಿ ಮಾತನಾಡಿ, ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಗ್ರಾಹಕರಿಗೆ ಲಾಭಾಂಶದ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸಿಲ್ಲ. ಡಿವ್ಹಿಡೆಂಡ್ ಹೆಚ್ಚಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಅಧ್ಯಕ್ಷ ಓಸ್ವಾಲ್,ನಮ್ಮ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳುವ ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿ ಅದರಿಂದ ಬಂದ ಆದಾಯವನ್ನು ಲಾಭಾಂಶದ ರೂಪದಲ್ಲಿ ಹೆಚ್ಚಿಸಿಕೊಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಹಿರಿಯ ನಿರ್ದೇಶಕರಾದ ಎಸ್.ಎಸ್.ಮಾಲಗತ್ತಿ, ವೆಂಕನಗೌಡ ಪಾಟೀಲ್ ಮಾತನಾಡಿದರು.

ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರಾಜಶೇಖರ ಕರಡ್ಡಿ, ಪ್ರಭುದೇವ ಕಲ್ಬುರ್ಗಿ, ರುದ್ರಪ್ಪ ಕಡಿ, ಜಿ.ಬಿ.ಪಾಟೀಲ್, ಶ್ರೀದೇವಿ ಮದರಿ, ವೃತ್ತಿಪರ ನಿರ್ದೇಶಕ ಸುನೀಲ ಇಲ್ಲೂರ ಇದ್ದರು.

ಇದನ್ನೂ ಓದಿ: ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ವೃತ್ತಿಪರ ನಿರ್ದೇಶಕ ನಾಗಭೂಷಣ ನಾವದಗಿ ಸ್ವಾಗತಿಸಿದರು. ಎಂ.ಕೆ.ರಾಯಗೊಂಡ ಸುಮಾ ನಾಡಗೌಡ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ